ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ
ಬ್ಯಾಡಗಿ11: ಪ್ರತಿಯೊಬ್ಬ ಪಾಲಕರೂ ತಮ್ಮ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಂತು ಹುಳು ನಿವಾರಣಾ ಮಾತ್ರೆಗಳನ್ನು ತಪ್ಪದೇ ಹಾಕುವ ಮೂಲಕ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಕೆ. ರುದ್ರಮುನಿ ಹೇಳಿದರು.
ಪಟ್ಟಣದ ಎಸ್.ಎಸ್.ಪಿ.ಎನ್. ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಜಂತು ಹುಳು ನಿರ್ಮೂಲನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಆಲ್ಬೇಂಡೋಜಲ್ ಮಾತ್ರೆಗಳನ್ನು ವಿತರಿಸಿ ಮಾತನಾಡಿದ ಅವರು ಮಕ್ಕಳು ಹೊಟ್ಟೆನೋವು ಎಂದಾಗ ಅದರ ಬಗ್ಗೆ ನಿರ್ಲಕ್ಷ್ಯ ತೋರದೆ ಸಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿ ಮಕ್ಕಳ ಆರೋಗ್ಯವನ್ನು ಕಾಪಾಡಲು ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ತಿಮ್ಮಾರೆಡ್ಡಿ ಮಾತನಾಡಿ, ಮಕ್ಕಳು ಆಹಾರ ಸೇವಿಸುವ ಮುನ್ನ ಕೈಗಳ ಸ್ವಚ್ಛತೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರಲ್ಲದೆ ಮಕ್ಕಳಿಗೆ ಅನಗತ್ಯ ಆಹಾರಗಳ ಸೇವನೆಯಿಂದ ದೂರವಿರಿಸಿ ಸದೃಡ ಆರೋಗ್ಯಕ್ಕೆ ಕ್ರಮವಹಿಸಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ. ಎಫ್. ಬಾಕರ್ಿ, ಶಿಕ್ಷಣ ಸಂಯೋಜಕರಾದ ಬಸವರಾಜ ಸೋಮಕ್ಕಳವರ, ಆರ್.ಎಂ. ಮಳವಳ್ಳಿ, ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 