ಪ್ರಕೃತಿ ವಿಕೋಪ: ಭಾರತದಲ್ಲಿ ಕಳೆದ ವರ್ಷ 5 ದಶಲಕ್ಷ ಮಂದಿ ಸ್ಥಳಾಂತರ: ವಿಶ್ವಸಂಸ್ಥೆ
ನವದೆಹಲಿ, ಮೇ 23,ಅಂಫಾನ್ ಚಂಡಮಾರುತದಿಂದಾಗಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಸಂಖ್ಯೆಯ ಜನರ ಸ್ಥಳಾಂತರವಾಗಿದೆ. ಈ ವರದಿಗಳ ಮಧ್ಯೆ, ನೈಸರ್ಗಿಕ ವಿಪತ್ತುಗಳು, ಸಂಘರ್ಷ ಮತ್ತು ಹಿಂಸಾಚಾರದಿಂದಾಗಿ 2019 ರಲ್ಲಿ ಭಾರತದಲ್ಲಿ 5 ದಶಲಕ್ಷಕ್ಕೂ ಹೆಚ್ಚು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ. ಈ ಅಂಕಿ ಅಂಶವು ವಿಶ್ವದಲ್ಲೇ ಅತಿ ಹೆಚ್ಚು ಆಂತರಿಕ ಸ್ಥಳಾಂತರಗಳನ್ನು ಹೊಂದಿದೆ. ಭಾರತದ ನಂತರ ಫಿಲಿಪೈನ್ಸ್, ಬಾಂಗ್ಲಾದೇಶ ಮತ್ತು ಚೀನಾ ದೇಶಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.ಯುಎನ್ ಚಿಲ್ಡ್ರನ್ಸ್ ಫಂಡ್ –ಯುನಿಸೆಫ್ ನ ವರದಿ 'ಲಾಸ್ಟ್ ಅಟ್ ಹೋಮ್' 2019 ರಲ್ಲಿ ಸುಮಾರು 33 ಮಿಲಿಯನ್ ಹೊಸ ಸ್ಥಳಾಂತರಗಳನ್ನು ವಿಶ್ವದಾದ್ಯಂತ ದಾಖಲಿಸಲಾಗಿದೆ ಎಂದು ಹೇಳಿದೆ. ಈ ಪೈಕಿ ಸುಮಾರು 25 ದಶಲಕ್ಷ ಜನರು ನೈಸರ್ಗಿಕ ವಿಪತ್ತಿನಿಂದ, 8.5 ದಶಲಕ್ಷ ಮಂದಿ ಸಂಘರ್ಷ ಮತ್ತು ಹಿಂಸಾಚಾರದ ಪರಿಣಾಮದಿಂದಾಗಿ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 