ಸಿಎಎಯಿಂದ ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮ: ಮಾಯಾವತಿ
ಲಕ್ನೋ, ಡಿ 17: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಹಿಂದೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿರುವ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಮಾಯಾವತಿ, ಮಂಗಳವಾರ ಈ ಅಸಂವಿಧಾನಿಕ ಕಾನೂನು ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ.ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, "ಈ ಅಸಂವಿಧಾನಿಕ ಕಾನೂನನ್ನು ಹಿಂದೆಗೆದುಕೊಳ್ಳುವಂತೆ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ, ಇಲ್ಲದಿದ್ದರೆ ಅದು ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮಗಳನ್ನು ಬೀರಬಹುದು. ಕೇಂದ್ರ ಸರ್ಕಾರವು, ತುತರ್ು ಪರಿಸ್ಥಿತಿಯಂತಹ ವಾತಾರವಣ ಸೃಷ್ಟಿಸಬಾರದು, ಕಾಂಗ್ರೆಸ್ ಈ ಹಿಂದೆ ಇದನ್ನೇ ಮಾಡಿತ್ತು ಎಂದು ಹೇಳಿದ್ದಾರೆ.ಸಿಎಎ ಬಗ್ಗೆ ದೂರು ನೀಡಲು ರಾಷ್ಟ್ರಪತಿಯವರ ಭೇಟಿಗೆ ಸಮಯವನ್ನು ಬಿಎಸ್ಪಿ ಸಂಸದೀಯ ಸಮಿತಿ ಕೋರಿದೆ ಎಂದು ಮಾಹಿತಿ ನೀಡಿದರು.ಸಿಎಎ ವಿರುದ್ಧ ಮತ್ತು ಯುಪಿ ಅಸೆಂಬ್ಲಿಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆಯೂ ಬಿಎಸ್ಪಿ ಧ್ವನಿ ಎತ್ತಲಿದೆ ಎಂದು ಅವರು ತಿಳಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 