ನೌಕರರ ತುಟ್ಟಿಭತ್ಯೆ ಹೆಚ್ಚಳ ಆದೇಶ ತಡೆ ಹಿಡಿದ ದೆಹಲಿ ಸರ್ಕಾರ
ನವದೆಹಲಿ, ಏ 30, ಕೊರೊನಾ ಮತ್ತು ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಆರ್ಥಿಕತೆ ಸರಿದೂಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು 2021 ರ ಜುಲೈ ಅಂತ್ಯದ ರವರೆಗೆ ನೌಕರರ ತುಟ್ಟಿಭತ್ಯೆ ಹೆಚ್ಚಳ ತಡೆ ಹಿಡಿಯಲು ತೀರ್ಮಾನಿಸಿದೆ.ತುಟ್ಟಿಭತ್ಯೆ ತಡೆಹಿಡಿಯುವ ವಿಚಾರದಲ್ಲಿ ಕೇಂದ್ರದ ಆದೇಶವನ್ನು ದೆಹಲಿ ಸರ್ಕಾರವು ಅನುಮೋದಿಸಿದೆ. ಇದು ದೆಹಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನ್ವಯಿಸಲಿದೆ ಎಂದು ದೆಹಲಿ ಹಣಕಾಸು ಇಲಾಖೆ ಸ್ಪಷ್ಪಪಡಿಸಿದೆ.ದೆಹಲಿ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸುಮಾರು 2.2 ಲಕ್ಷ ನೌಕರರು ಮತ್ತು ಪಿಂಚಣಿದಾರರಿಗೆ ಇದು ಅನ್ವಯವಾಗಲಿದೆ. ಈ ನಿರ್ಧಾರದ ಮೂಲಕ ಕೇಂದ್ರ ಸರ್ಕಾರದ ನಡೆಯನ್ನೇ ಅನುಸರಿಸಲು ದೆಹಲಿ ಸರ್ಕಾರ ಮುಂದಾಗಿದೆ. ನಿನ್ನೆಯಷ್ಟೆ ಕೇರಳ ಸರ್ಕಾರ ನೌಕರರ ವೇತನ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿತ್ತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 