ಹೊಸ ಶಿಕ್ಷಣ ನೀತಿ : ಎರಡು ಲಕ್ಷಕ್ಕೂ ಅಧಿಕ ಸಲಹೆ
ನವದೆಹಲಿ, ನ 21: ಹೊಸ ಶಿಕ್ಷಣ ನೀತಿ ಎನ್ ಇ ಪಿ ಗೆ ಸಂಬಂಧಿಸಿದಂತೆ ತಜ್ಞರು ಮತ್ತು ವಿವಿಧ ಸಂಬಂಧಪಟ್ಟವರಿಂದ ಎರಡು ಲಕ್ಷಕ್ಕೂ ಹೆಚ್ಚು ಸಲಹೆಗಳು ಸ್ವೀಕೃತವಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್ ನೇತೃತ್ವದ ಸಮಿತಿ ನೀಡಿರುವ ವರದಿ ಸಂಬಂಧ ಸುದೋರ್ಘ ಸಮಾಲೋಚನೆ ನಡೆಸಲಾಗಿದೆ. ರಾಜ್ಯಗಳ ಶಿಕ್ಷಣ ಸಚಿವರು, ವಿವಿಧ ರಾಜ್ಯಗಳ ಸಂಸದರು, ಶಿಕ್ಷಣ ತಜ್ಞರು, ಪೋಷಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ವಿವಿಧ ಮೂಲಗಳಿಂದ ದೊರೆತ ಸಲಹೆಗಳನ್ನು ವಿಶ್ಲೇಷಿಸಿ ಹೊಸ ಶಿಕ್ಷಣ ನೀತಿಯ ಕರಡನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆದಿದೆ ಎಂದರು.
ಪ್ರಸ್ತುತ ಸಕರ್ಾರ ಅಧಿಕಾರಕ್ಕೆ ಬರುವ ಮುನ್ನವೇ ಎನ್ ಇ ಪಿ ಕಾರ್ಯ ಆರಂಭವಾಗಿತ್ತು ಎಂದು ಸಹ ಅವರು ತಿಳಿಸಿದ್ದಾರೆ.
ಸುಮಾರು 42 ಲಕ್ಷ ಶಿಕ್ಷಕರು, ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಣ ವಲಯದ ಅಧಿಕಾರಿಗಳಿಗಾಗಿ ಆಗಸ್ಟ್ 21 ರಂದು ನಿಷ್ಠತಾ ಎಂಬ ರಾಷ್ಟ್ರವ್ಯಾಪಿ ಶಿಕ್ಷಕರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಅಲ್ಲದೇ 20 ಕೇಂದ್ರೀಯ ಶಾಲೆಗಳನ್ನು ಸಹ ತೆರೆಯಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 