ನೂತನ ನ್ಯಾಯಾಧೀಶೆ ಪದ್ಮಾವತಿಯವರಿಗೆ ಭಾರತೀಯ ಜನತಾ ಪಾರ್ಟಿ ಮಂಡಳಿಯಿಂದ ಸನ್ಮಾನ
New Judge Padmavati felicitated by Bharatiya Janata Party board
ದಾಂಡೇಲಿ - 23 : ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಪದ್ಮಾವತಿಯವರನ್ನು ಅವರ ಮನೆಗೆ ತೆರಳಿ ಸ್ಥಳೀಯ ಭಾರತೀಯ ಜನತಾ ಪಾರ್ಟಿ ಮಂಡಳದವತಿಯಿಂದ ಸೋಮವಾರ ಮುಂಜಾನೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿ.ಜೆ.ಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಹಾಗೂ ಮಾಜಿ ಶಾಸಕರಾದ ಸುನೀಲ ಹೆಗಡೆಯವರು ಮಾತನಾಡಿ ಇಂದು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಕನಸು ನನಸಾದಂತಾಗಿದೆ. ಬಡತನದಲ್ಲಿಯೇ ವಿದ್ಯಾಭ್ಯಾಸವನ್ನು ಮುಗಿಸಿ ನ್ಯಾಯಾಧೀಶೆಯಾಗಿ ಆಯ್ಕೆಯಾದ ದಾಂಡೇಲಿಯ ಪದ್ಮಾವತಿಯವರ ಸಾಧನೆ ಸಂವಿಧಾನಕ್ಕೆ ಬಲ ತುಂಬಿದಂತಾಗಿದೆ. ಎಂದು ನುಡಿದು ಬರುವ ದಿನಗಳಲ್ಲಿ ಪದ್ಮಾವತಿಯವರಿಗೆ ಹೆಚ್ಚಿನ ಶ್ರೇಯಸ್ಸು ಲಬ್ಯವಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಸ್ಥಳೀಯ ಅಧ್ಯಕ್ಷರಾದ ಬುಧವಂತಗೌಡ ಪಾಟೀಲ್ ಉಪಾಧ್ಯಕ್ಷ ಗುರುಮಠಪತಿ, ಪ್ರಧಾನ ಕಾರ್ಯದರ್ಶಿ ಗೀರಿಶ್ ಟೋಸುರ್, ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 