ನೂತನ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಹಂದಿಗುಂದ ಗ್ರಾಮಸ್ಥರಿಂದ ಗೌರವ ಸನ್ಮಾನ
New Minister Satish Jarkiholi felicitated by Handigunda villagers
ಪಾಲಬಾವಿ 07 : ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಕರದಂಟು ನಾಡಿನ ಕರುಣಾಮಯಿ, ಸಾಹುಕಾರ್ ಸತೀಶ್ ಜಾರಕಿಹೊಳಿಯವರು ಲೋಕೋಪಯೋಗಿ ಇಲಾಖೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಯುಕ್ತ ಜೂನ್. 07ರಂದು ರವಿವಾರ ಮುಂಜಾನೆ 11ಗಂಟೆಗೆ ಗೋಕಾಕದ ಹಿಲ್ ಗಾರ್ಡನ್ ನಿವಾಸದಲ್ಲಿ ಹಂದಿಗುಂದ ಗ್ರಾಮದ ಕಾಂಗ್ರೆಸ್ ಪಕ್ಷದ ನಾಯಕ ಪರಗೌಡ ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರುಸೇರಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಲು ಹೊದಿಸಿ ಫಲಪುಷ್ಪ, ಹಾಕಿ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪರಗೌಡ ಪಾಟೀಲ, ಸಚಿವರ ಆಪ್ತ ಸಹಾಯಕ ಬಸವರಾಜ ಸಾಯನ್ನವರ, ಗ್ರಾಪಂ ಮಾಜಿ ಸದಸ್ಯರಾದ ಹನುಮಂತ ಗಸ್ತಿ, ಮುತ್ತಪ್ಪ ತಳವಾರ, ಹಾಲು ಸಿದ್ದೇಶ್ವರ ದೇವಸ್ಥಾನದ ಅರ್ಚಕ ಶ್ರೀಮಂತ ಪೂಜಾರಿ, ಸುರೇಶ ಕೂಟಗಿ, ಲಕ್ಕಪ್ಪ ಹೊಸಾಲಿ, ಸಿದ್ದರಾಯ ಪೂಜಾರಿ ಇದ್ದರು.ಫೋಟೋ ಶೀರ್ಷಿಕೆ:-ನೂತನ ಸಿಎಂ ಡಿಕೆ ಶಿವಕುಮಾರ್, ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿ ಪ್ರಮಾಣವಚದ ಸ್ವೀಕರಿಸಿದ ಸಾಹುಕಾರ್ ಸತೀಶ್ ಜಾರಕಿಹೊಳಿ ಅವರನ್ನು ಹಂದಿಗುಂದ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೌರವಿಸಿ ಸನ್ಮಾನಿಸಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 