ಪಟ್ಟಣದ ಸ್ವಚ್ಛತೆಗೆ ಹೊಸ ವಾಹನ ಲೋಕಾರ್ಪಣೆ
New vehicle unveiled for town cleanliness
ಲಕ್ಷ್ಮೇಶ್ವರ 17: ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಲು ಪುರಸಭೆಗೆ ಬಂದ ಎರಡು ಹೂಸ ಟ್ಯಾಕ್ಟರ್ ಒಂದು ಕಸ ವಿಲೇವಾರಿ ಘಟಕದಲ್ಲಿ ಕ್ಲೀನಿಂಗ್ ಮಾಡುವ ಲಾರಿಯನ್ನು ಪಟ್ಟದ ಪಂಪ ಸರ್ಕಲ್ ಹತ್ತಿರ ಶಾಸಕ ಡಾ ಚಂದ್ರು ಲಮಾಣಿ ಅವರು ಪೂಜೆ ಗೊಳಿಸುವ ಮೂಲಕ ಲೋಕಾರೆ್ಣ ಗೊಳಿಸಿದರು.
ಈ ಸಮಯದಲ್ಲಿ ಮಾತನಾಡಿದ ಅವರು ಲಕ್ಷ್ಮೇಶ್ವರ ಪಟ್ಟಣವು ಅತಿ ವೇಗವಾಗಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದ್ದು ಪಟ್ಟಣದ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಲಾಗುತ್ತಿದೆ. ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ ಪೌರಕಾರ್ಮಿಕರ ಸಂಖ್ಯೆ ಬಹಳ ಕಡಿಮೆ ಇದರಿಂದ ಪಟ್ಟಣದ ಸ್ವಚ್ಛತೆಗೆ ಬಹಳ ತೊಂದರೆಯಾಗುತ್ತಿದ್ದು ಹೆಚ್ಚು ಪೌರಕಾರ್ಮಿಕ ನೇಮಕಾತಿಗೆ ಸಹಕಾರದ ಮೇಲೆ ಒತ್ತಡ ತರಲಾಗುವುದು ಎಂದು ತಿಳಿಸಿದ ಅವರು ಪಟ್ಟಣದ ಪುರಸಭೆಯ ಮುಖ್ಯ ಅಧಿಕಾರಿ ಪರಶುರಾಮ್ ಗುಡುದಾರಿ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮುದುಗಲ್ ಮುಖಂಡರಾದ ಸುನಿಲ ಮಹಾಂತಶೆಟ್ಟರ ಎಂ ಆರ್ ಪಾಟೀಲ್ ಗಂಗಾಧರ ಮೆಣಸಿನಕಾಯಿ ಸೇರಿದಂತೆ ಅನೇಕ ಮುಖಂಡರು ಹಾಗೂ ಪುರಸಭೆ ಎಲ್ಲಾ ಸಿಬ್ಬಂದಿ ವರ್ಗದವರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡರು.
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ 