ನವದೆಹಲಿ: ಚುನಾವಣಾ ದೃಷ್ಟಿಯಿಂದ ನೀರವ್ ಮೋದಿ ಬಂಧನ: ಕಾಂಗ್ರೆಸ್
ನವದೆಹಲಿ, ಮಾ 20: ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಬಹುಕೋಟಿ ವಂಚನೆ ಪ್ರಕರಣದ ರೂವಾರಿ ನೀರವ್ ಮೋದಿ ಬಂಧನವನ್ನು ಕಾಂಗ್ರೆಸ್ ಟೀಕಿಸಿದೆ.
ಈ ಮೊದಲು ಆತನ ಪರಾರಿಗೆ ಅವಕಾಶ ಕಲ್ಪಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ, ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿರುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಬುಧವಾರ ಹೇಳಿದ್ದಾರೆ.
“ಆತ ವಿದೇಶಕ್ಕೆ ಪರಾರಿಯಾಗಲು ಸಹಕರಿಸಿದ್ದು ಬಿಜೆಪಿ. ಇದೀಗ ಆತನನ್ನು ಹಿಂದಕ್ಕೆ ಕರೆಸಿಕೊಂಡಿರುವುದೂ ಬಿಜೆಪಿ. ಚುನಾವಣಾ ದೃಷ್ಟಿಯಿಂದ ಹಿಂದಕ್ಕೆ ಕರೆಸಿಕೊಂಡಿದ್ದು, ಮುಗಿದ ಬಳಿಕ ಮತ್ತೆ ಕಳುಹಿಸುತ್ತಾರೆ” ಎಂದು ಗುಲಾಂ ನಬಿ ಆಜಾದ್ ವ್ಯಂಗ್ಯವಾಡಿದ್ದಾರೆ.
ವಜ್ರೋದ್ಯಮಿ, 48 ವರ್ಷ ವಯಸ್ಸಿನ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ.ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಮುಂಬೈ ಶಾಖೆಯಲ್ಲಿ 14 ಸಾವಿರ ಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ ನೀರವ್ ಮೋದಿಯ ಅಗತ್ಯವಿದೆ.
ಮಧ್ಯ ಲಂಡನ್ ನ ಹೋಲ್ ಬೋರ್ನ್ ವಲಯದಲ್ಲಿ ಮಂಗಳವಾರ ನೀರವ್ ಮೋದಿಯನ್ನು ಬಂಧಿಸಲಾಗಿದೆ. ಅವರನ್ನು ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರು ಪಡಿಸುವ ನಿರೀಕ್ಷೆಯಿದೆ. ನ್ಯಾಯಾಲಯವು ಸೋಮವಾರ ಬಂಧನದ ವಾರೆಂಟ್ ಜಾರಿಗೊಳಿಸಿತ್ತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 