"ನೀ ಸಿಗುವ ಮೊದಲು" ಚಲನಚಿತ್ರ ಪೋಸ್ಟರ್ ಬಿಡುಗಡೆ
Ni Siguva Munna movie poster released
ಬೆಂಗಳೂರ 19: ಶ್ರೀ ವೀರಭದ್ರೇಶ್ವರ ಸಿನಿ ಕ್ರಿಯೇಷನ್ ಅವರ ಮನು ಸಹಕಾರದ "ನೀ ಸಿಗುವ ಮೊದಲು" ಎಂಬ ಸ್ಟೋರಿ ಕಂಟೆಂಟ್ ಆಲ್ಬಮ್ ಸಾಂಗ್ ಹಾಗೂ ಹೊಸಚಲನಚಿತ್ರದ ಪೋಸ್ಟರನ್ನು ಚಲನಚಿತ್ರ ನಟ ಆ್ಯಕ್ಷನ್ಪ್ರಿನ್ಸ್ ಧ್ರ್ರುವ ಸರ್ಜಾ ಬಿಡುಗಡೆ ಮಾಡಿದರು.
ಪೋಸ್ಟರ ಬಿಡುಗಡೆ ನಂತರ ಧ್ರ್ರುವ ಸರ್ಜಾ ಯುವ ಕಲಾವಿದರಿಗೆ, ತಂಡಕ್ಕೆ ಶುಭಕೋರಿದರು. ಹಿರಿಯ ಪ್ರಬುಧ್ದ ಕಲಾವಿದರಾದ ಧ್ರ್ರುವ ಸರ್ಜಾ ಅವರು ಪೋಸ್ಟರ್ ಬಿಡುಗಡೆ ಮಾಡಿ ಪ್ರೋತ್ಸಾಹಿಸಿ ಶುಭ ಹಾರೈಸಿದ್ದಾರೆ. ಅದು ನಮ್ಮ ಭಾಗ್ಯ. ನಿಜಕ್ಕೂ ತಂಡಕ್ಕೆ ಖುಷಿಯಾಗಿದೆ. ಮಡಿಕೇರಿ ಆನೆ ದುಬಾರಿ ಸಕಲೇಶಪುರ ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರಿಕರಣ ನಡೆಸಲಾಗಿದ್ದು, ಕಲಾವಿದರಾದ ಮೋಹನ್ ಬಿ ಮತ್ತು ಅಶ್ವಿನಿ ಶೆಟ್ಟಿ ಮನೋಜ್ಞವಾಗಿ ನಟಿಸಿದ್ದಾರೆ. ಸದ್ಯ ಆಲ್ಬಂ ಸಾಂಗ್ ಮಾತ್ರ ಬಿಡುಗಡೆ ಮಾಡುತ್ತಿದ್ದು ಇದೇ ಹೆಸರಿನಲ್ಲಿ ಚಲನಚಿತ್ರ ನಿರ್ಮಾಣ ತಯ್ಯಾರಿ ನಡೆಸಿದ್ದೇವೆ.ಶೀಘ್ರದಲ್ಲೇ ಚಿತ್ರೀಕರಣ ಕೂಡ ಆರಂಭಿಸುತ್ತೇವೆ ಎಂದು ನಿರ್ದೇಶಕ ರಘು ತಿಳಿಸಿದರು.
ಚಿತ್ರಕಥೆ,ನಿರ್ದೇಶನ ರಘು ಅ ರೂಗಿ , ಸಂಭಾಷಣೆ, ಸಹನಿರ್ದೇಶನ ರಮೇಶ್ ಜಿ,ಆರ್ , ಕಥೆ,ಸಾಹಿತ್ಯ ,ಸಂಗೀತ ,ವಿಶಾಲ್ ಆಲಾಪ್ , ಹಿನ್ನಲೆ ಸಂಗೀತ ಎ ಟಿ ರವೀಶ್ , ಸಂಕಲನ, ಛಾಯಾಗ್ರಹಣ ಪ್ರೀತಮ್ ಪೂಜಾರಿ , ಗಾಯಕರು ವಿಶಾಕ್ ನಾಗಲಾಪುರ , ಕೀರ್ತನ ಚಂದ್ರು , ಮ್ಯುಜಿಷಿಯನ್ ಅಭಿನವ್ ಅಯ್ಯಂಗಾರ್ , ಸೌಂಡ್ ಇಂಜಿನಿಯರ್ ವಿಜಯ್ ಅರುಣ್ , ರಘು ರೂಗಿ , ಪ್ರೋಗ್ರಾಮ್, ತೇಜಸ್ ಮತ್ತು ಆಕಾಶ್ ,ಮಾಸ್ಟರಿಂಗ್ -ಮಿಕ್ಸಿಂಗ್ ಸುರಾಜ್ ಎಸ್ ವಾಸುದೇವ್, ಸಹಾಯ ಭಗವತಿ ಕಾಟೇಜ್ (ಮಡಿಕೇರಿ), ಮೋದಿ ತಳವಾರ. ಪ್ರೊಡಕ್ಷನ್ ಮ್ಯಾನೇಜರ್ ರಾಹುಲ್ ಎನ್.ಎಚ್, ಮಾಧ್ಯಮ ಸಂಪರ್ಕ ಡಾ. ಪ್ರಭು ಗಂಜಿಹಾಳ. ಡಾ. ವೀರೇಶ್ ಹಂಡಿಗಿ , ನಿರ್ಮಾಪಕರು ವಾಣಿ ಕಾಂತರಾಜ್(ಬೇಲೂರು) ಆಗಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 