ನಿಖಿಲ್ ದಂಪತಿಗೆ ಟ್ವೀಟ್ ಮೂಲಕ ಶುಭಕೋರಿದ ನವರಸ ನಾಯಕ
ಬೆಂಗಳೂರು, ಏ.17, ಶುಭ ಶುಕ್ರವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಸ್ಯಾಂಡಲ್ ವುಡ್ ಜಾಗ್ವರ್ ಖ್ಯಾತಿಯ ನಿಖಿಲ್ ಕುಮಾರ್ ಸ್ವಾಮಿ ಹಾಗೂ ರೇವತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.ನವ ದಂಪತಿಗೆ ರಾಜಕೀಯ ಗಣ್ಯರು, ಸಿನಿರಂಗದ ಕಲಾವಿದರು, ಸೇರಿದಂತೆ ನಿಖಿಲ್ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.ಸ್ಯಾಂಡಲ್ ವುಡ್ ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಮಧುಮಕ್ಕಳಿಗೆ ಶುಭ ಕೋರಿದ್ದಾರೆ. ನಿಖಿಲ್ ಮಾಂಗಲ್ಯಧಾರಣೆ ಮಾಡುವ ಫೋಟೋ ಶೇರ್ ಮಾಡಿರುವ ಜಗ್ಗೇಶ್, "ಮದುವೆ ಸ್ವರ್ಗದಲ್ಲಿ ನಿಶ್ಚಯಿಸಿದ ದೇವರ ನಿಯಮ. ತಂದೆ-ತಾಯಿ, ತಾತ-ಅಜ್ಜಿ ಆಶೀರ್ವಾದ ಪಡೆದು ಮದುವೆ ಆಗುವುದಕ್ಕೆ ವಿಶೇಷ ಯೋಗ ಬೇಕು. ಅದು ಪಡೆದ ಅದೃಷ್ಟವಂತ ನಿಖಿಲ್. ನೀವು ನೂರ್ಕಾಲ ಸುಖವಾಗಿ ಬಾಳಿ ಎಂದು ಶುಭ ಹಾರೈಸಿದ್ದಾರೆ.ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ನಿಖಿಲ್- ರೇವತಿ ವಿವಾಹ ಇಂದು ಬಿಡದಿ ಬಳಿಯ ಕೇತುಗಾನಹಳ್ಳಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ್ ಸ್ವಾಮಿ ಅವರ ತೋಟದ ಮನೆಯಲ್ಲಿ ಸರಳವಾಗಿ ನೇರವೇರಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 