ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಲು ಕೇಂದ್ರ ಶಿಫಾರಸ್
ನವದೆಹಲಿ, ಜನವರಿ 17, ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದ್ದರೂ ಇದನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸ್ ಸಹ ಮಾಡಿದೆ.
ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ಈ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿ ಮನವಿ ತಿರಸ್ಕರಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2012ರಲ್ಲಿ ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ(ಹೆಸರು ಬದಲಿಸಲಾಗಿದೆ) ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆಲ ದಿನಗಳ ಜೀವನ್ಮರಣ ಹೋರಾಟದ ಬಳಿಕ ಆಕೆ ದೂರದ ಸಿಂಗಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಎಲ್ಲಾ 6 ಮಂದಿಯನ್ನು ಬಂಧಿಸಿದ್ದರೂ ಒಬ್ಬ ಬಾಲಾಪರಾಧಿ ಎಂಬ ಕಾರಣಕ್ಕೆ ಆತನಿಗೆ ಬಾಲಾಪರಾಧ ನಿಯಮದ ಪ್ರಕಾರ ಶಿಕ್ಷೆಯಾಗಿ ಹೊರ ಬಂದಿದ್ದಾನೆ. ರಾಮ್ ಸಿಂಗ್ ಎಂಬ ಪ್ರಮುಖ ಆರೋಪಿಯು ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆಯಾಗಿದೆ. ಆದರೆ, ಮೇಲ್ಮನವಿ, ಕ್ಷಮಾದಾನ ಅರ್ಜಿಗಳ ಕಾರಣದಿಂದಾಗಿ ಅವರನ್ನು ಗಲ್ಲಿಗೇರಿಸುವುದು ತಡವಾಗುತ್ತಿದೆ. ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿ ಇದೇ 22ರಂದು ನೇಣಿಗೇರಿಸಲು ಆದೇಶ ಮಾಡಿತ್ತು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 