ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
ನವದೆಹಲಿ, ಜನವರಿ 29, ದೇಶವನ್ನೇ ನಡುಗಿಸಿದ್ದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಸಿಂಗ್ ಕ್ಷಮಾಧಾನ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಅಪರಾಧಿ ಮುಖೇಶ್ ಕುಮಾರ್ ಸಿಂಗ್, ರಾಷ್ಟ್ರಪತಿ ರಾಂನಾಥ್ ಕೋವಿಂದ್ ಅವರು ಕ್ಷಮಾಧಾನ ಮನವಿ ತಿರಸ್ಕರಿಸಿದ ಕ್ರಮ ಪ್ರಶ್ನಿಸಿ ಅಪರಾಧಿ ಸಿಂಗ್ ಸಲ್ಲಿಸಿದ್ದ ಮನವಿ ವಜಾ ಮಾಡಿ ಬುಧವಾರ ತೀರ್ಪು ಪ್ರಕಟಿಸಿದೆ. ಈ ಹಿಂದೆ ನಾಲ್ವರು ಅಪರಾಧಿಗಳಾದ ಅಕ್ಷಯ್ ಮತ್ತು ಮುಖೇಶ್ ಸಿಂಗ್ , ವಿನಯ್ ಶರ್ಮಾ (26) ಮತ್ತು ಪವನ್ ಗುಪ್ತಾ (26) ಅವರುಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವ ಬಗ್ಗೆ ಸಮಯ ನಿಗದಿಯಾಗಿತ್ತು. ಈಗ ಇದರ ಬಗ್ಗೆ ಇದ್ದ ಎಲ್ಲ ಅಡೆ ತಡೆಗಳು, ಕಾನೂನು ಸಮಸ್ಯೆಗಳು ನಿವಾರಣೆಯಾಗಿವೆ. ಅಪರಾಧಿಗಳು ನೇಣಿಗೆ ಕೊರಳುಕೊಡುವ ಸಮಯವೂ ಹತ್ತಿರವಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 