ಸಂದಿಗ್ಧ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ಸಣ್ಣ ಮಕ್ಕಳಲ್ಲ: ಡಾ. ಕೆ. ಸುಧಾಕರ್
ಬೆಂಗಳೂರು, ಏ. 4, ಕೊರೊನಾದಿಂದ ಇಡೀ ದೇಶವೇ ಸಂದಿಗ್ಧತೆಯಲ್ಲಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿರುಗೇಟು ನೀಡಿದ್ದಾರೆ.ನಮ್ಮದೇ ಆದ ಜವಾಬ್ದಾರಿಗಳಿವೆ. ಈ ಸುಳ್ಳು ಸುದ್ದಿಗಳ ಹಿಂದೆ ನೀಚ ರಾಜಕೀಯ ಷಡ್ಯಂತ್ರವಿದೆ.ನನ್ನ ಮತ್ತು ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೊರೋನಾ ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಮತ್ತು ಶ್ರೀರಾಮುಲು ಅಣ್ಣ-ತಮ್ಮಂದಿರಂತೆ ಈ ರಾಜ್ಯದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ ಎಂದು ಟ್ವಿಟರ್ನಲ್ಲಿ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಮಧ್ಯೆ ಸಮನ್ವಯತೆ ಇಲ್ಲ, ಭಿನ್ನಾಭಿಪ್ರಾಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ರಾಜಕೀಯ ನಾಯಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 