ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ : ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಜು 2 (ಯುಎನ್ಐ) ಜುಲೈ 12 ರಿಂದ ನಡೆಯಲಿರುವ ವಿಧಾನಮಂಡಲ ಮುಂಗಾರು ಅಧಿವೇಶನದಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ
ಡಾಲರ್ಸ ಕಾಲೋನಿ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ಮತ ಯಾಚಿಸುವ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಮೈತ್ರಿ ಸರ್ಕಾರದಲ್ಲಿನ ಬದಲಾವಣೆಗಳು, ರಾಜಕೀಯ ಬೆಳವಣಿಗೆಗಳನ್ನು ನೋಡಿ ಸದನದಲ್ಲಿ ಯಾವ ರೀತಿ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎಂಬ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಸಭೆಯ ಬಳಿಕವಷ್ಟೇ ಬಿಜೆಪಿಯ ಮುಂದಿನ ನಡೆ ಏನು ಎಂಬುದು ಸ್ಪಷ್ಟವಾಗಲಿದೆ ಎಂದರು.
ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಂದ ಬಿಜೆಪಿ ಶಾಸಕರಿಗೆ ಗಾಳ ಹಾಕಿರುವ ಕುರಿತ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕಾಂಗ್ರೆಸ್ ಗೆ ತೂತುಬಿದ್ದು ಒಂದೂವರೆ ತಿಂಗಳಾಗಿದೆ. ಇಂತಹ ತೂತುಬಿದ್ದು ಮುಳುಗುತ್ತಿರುವ ಹಡಗನ್ನು ಏರಲು ಯಾರು ಸಹ ಇಷ್ಟಪಡುವುದಿಲ್ಲ ಎಂದು ವ್ಯಂಗ್ಯವಾಡಿದರು.
ಕಳೆದ 3 ತಿಂಗಳಿನಿಂದಲೂ ಪಕ್ಷ ಬಿಟ್ಟು ಯಾವ ಶಾಸಕರೂ ಹೋಗುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದರೆ ನಿನ್ನೆ ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಏನು ಹೇಳುತ್ತಾರೋ ಗೊತ್ತಿಲ್ಲ ಎಂದರು.
ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ನಾವೆಲ್ಲಿಯೂ ಆಪರೇಷನ್ ಕಮಲ ಮಾಡುತ್ತೇವೆ ಎಂದು ಹೇಳಿಲ್ಲ. ತಾವು ಯಾವ ಶಾಸಕರನ್ನೂ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್-ಜೆಡಿಎಸ್ ಬೇಕಿದ್ದರೆ ರಿವಸರ್್ ಆಪರೇಷನ್ ಮಾಡಿಕೊಂಡು ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದು ಸವಾಲು ಹಾಕಿದರು.
ರಾಜ್ಯದ ಅಭಿವೃದ್ಧಿಯನ್ನು ಪರಿಗಣಿಸದ ಮುಖ್ಯಮಂತ್ರಿ ಎಂದರೆ ಅದು ಕುಮಾರಸ್ವಾಮಿ. ಜನರ ಸಮಸ್ಯೆಗೆ ಸ್ಪಂದಿಸಬೇಕಾಗಿರುವ ಮುಖ್ಯಮಂತ್ರಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕಾ ಬಹಳ ದೂರವೇನಿಲ್ಲ. ಬೇಗನೇ ರಾಜ್ಯಕ್ಕೆ ಬಂದು ರಿವರ್ಸ ಆಪರೇಷನ್ ಮಾಡಿಕೊಂಡು ಸಋ ರ್ಕಾರವನ್ನು ಉಳಿಸಿಕೊಳ್ಳಲಿ ಎಂದರು.
ಶಾಸಕ ಮಾಧುಸ್ವಾಮಿ ಮಾತನಾಡಿ, ಮೈತ್ರಿ ಸರ್ಕಾರದ ತೆಪ್ಪದಲ್ಲಿ ಮಂಗಗಳು ಕುಳಿತಿದ್ದು, ಮಂಗಗಳು ಆಕಡೆ, ಈ ಕಡೆ ಜಿಗಿದಾಕ್ಷಣ ತೆಪ್ಪ ಮುಳುಗಿ ಹೋಗುತ್ತದೆ ಎಂದು ವ್ಯಂಗ್ಯವಾಗಿ ಟೀಕಿಸಿದರು.
ಜೆಡಿಎಸ್-ಕಾಂಗ್ರೆಸ್ನಿಂದ ಬಿಜೆಪಿ ಶಾಸಕರ ರಿವರ್ಸ ಆಪರೇಷನ್ ನಡೆಸಲಾಗುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಶಾಸಕರು ಪಕ್ಷ ಬಿಡುವುದಿಲ್ಲ. ಬಿಜೆಪಿಯ ಶಾಸಕರು ಕಾಂಗ್ರೆಸ್-ಜೆಡಿಎಸ್ ಸೇರುತ್ತಾರೆ ಎನ್ನುವುದೆಲ್ಲ ಸುಳ್ಳು. ಪಶ್ಚಿಮ ಬಂಗಾಳದ ಶಾಸಕರುಗಳೇ ಬಿಜೆಪಿ ಕಡೆ ವಾಲಿದ್ದಾರೆ ಎಂದ ಮೇಲೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ರಿವರ್ಸ ಆಪರೇಷನ್ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 