ಪ್ರಯಾಣಿಕ ವಿಮಾನ ಹಾರಾಟದ ನಿರ್ಧಾರವಾಗಿಲ್ಲ : ಹರ್ ದೀಪ್ ಸಿಂಗ್ ಪುರಿ
ನವದೆಹಲಿ, ಏ 19, ಸ್ಥಳೀಯ ಅಥವಾ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ
ಪುನರಾರಂಭಿಸುವ ಕುರಿತು ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಟ್ವೀಟ್
ಮಾಡಿರುವ ಅವರು, ಸರ್ಕಾರ ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ನಿರ್ದೇಶನ ನೀಡಿದ
ಬಳಿಕವಷ್ಟೇ ವಿಮಾನಯಾನ ಸಂಸ್ಥೆಗಳು ಟಿಕೆಟ್ ಬುಕಿಂಗ್ ಆರಂಭಿಸುವಂತೆ ಸಲಹೆ
ನೀಡಿದ್ದಾರೆ.ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ವಿಮಾನ ಹಾರಾಟದ ಮೇಲೆ ನಿರ್ಬಂಧ
ಹೇರಲಾಗಿದ್ದು ಜೂನ್ 1 ರಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭಿಸುವುದಾಗಿ ಏರ್
ಇಂಡಿಯಾ ಸಂಸ್ಥೆ ಶನಿವಾರ ಹೇಳಿದ ನಂತರ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ
ಏರ್ ಇಂಡಿಯಾ ಮುಂದಿನ ತಿಂಗಳ ಅಂದರೆ ಮೇ 4 ರಿಂದ ದೇಶೀಯ ವಿಮಾನಗಳಲ್ಲಿ ಪ್ರಯಾಣಕ್ಕೆ
ಟಿಕೆಟ್ ಬುಕ್ಕಿಂಗ್ ಆರಂಭಿಸಿತ್ತು ಎಂದೂ ಹೇಳಲಾಗಿದೆ. ಇದೀಗ ಸರ್ಕಾರ ಸ್ಪಷ್ಟನೆ
ನೀಡಿದ್ದು ಮುಂದಿನ ಆದೇಶದವರೆಗೂ ಯಾವುದೇ ಪ್ರಯಾಣಿಕ ವಿಮಾನ ಹಾರಾಟಕ್ಕೆ ಅವಕಾಶವಿಲ್ಲ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 