ಶಿವಕುಮಾರ್ ಅವರೊಂದಿಗೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು, ಸೆ 18 ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗುರುವಾರ ಹಾಜರಾಗುವುದಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೊಟೀಸ್ ಜಾರಿಯಾಗಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಡಿಯಿದ ನೋಟಿಸ್ ಬಂದಿದೆ. ಸೆ 14ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲು ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದರು.
ಒಂದು ಸಾಲಿನ ಬರಹದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ನೊಟೀಸ್ ನಲ್ಲಿ ವಿಚಾರಣೆಗೆ ಸಂಬಂಧಿಸಿದಂತೆ ಯಾವುದೇ ಕಾರಣ ನೀಡಿಲ್ಲ, ತಾವು ಸೇರಿದಂತೆ ಒಟ್ಟು 184 ಮಂದಿಗೆ ನೊಟೀಸ್ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಡಿ.ಕೆ ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡಿದ್ದಾರೆಯೋ ಎಂಬುದನ್ನು ನೊಟೀಸ್ ನಲ್ಲಿ ನಮೂದಿಸಿಲ್ಲ. ಶಿವಕುಮಾರ್ ಹಾಗೂ ತಮ್ಮ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 