ಆಂತರಿಕ ವ್ಯವಹಾರಗಳಲ್ಲಿ ಅನ್ಯರ ಹಸ್ತಕ್ಷೇಪ ಸಹಿಸುವುದಿಲ್ಲ : ವೆಂಕಯ್ಯನಾಯ್ಡು
ಹೈದರಾಬಾದ್, ಆಗಸ್ಟ್ 31: ಭಾರತ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಮತ್ತು ಭವಿಷ್ಯದಲ್ಲಿಯೂ ಮಾಡುವುದಿಲ್ಲ, ನೆರೆ ಹೊರೆ ರಾಷ್ಟ್ರಗಳ ಜೊತೆ ಸದಾ ಉತ್ತಮ ಸ್ನೇಹ ಸಂಬಂಧ ಬಯಸುತ್ತದೆ ಎಂದು ಉಪರಾಷ್ಟ್ರಪತಿ ಎಂ .ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.
ಅದರೆ ದೇಶದ ಆಂತರಿಕ ವ್ಯವಹಾರಗಳಲ್ಲಿ ಯಾವುದೇ ದೇಶ ಹಸ್ತಕ್ಷೇಪ ಮಾಡಿದರೆ ಸೂಕ್ತ ಉತ್ತರ ನೀಡಲಿದೆ ಜೊತೆಗೆ ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ವಿದೇಶಾಂಗ ಸಚಿವಾಲಯ ಮತ್ತು ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ ಜಂಟಿಯಾಗಿ ಆಯೋಜಿಸಿದ್ದ ಅಡೆತಡೆಗಳ ಯುಗದಲ್ಲಿ ಆರ್ಥಿಕ ರಾಜತಾಂತ್ರಿಕತೆ ಎಂಬ ಸಮಾವೇಶದಲ್ಲಿ ಅವರು ಮಾತನಾಡಿದರು.
ಭಾರತ ಶಾಂತಿ ಪ್ರಿಯ ದೇಶ ಮತ್ತು ವಸುದೈವ ಕುಟುಂಬಕಂ (ಜಗತ್ತು ಒಂದು ಕುಟುಂಬ) ಮತ್ತು ಪ್ರತಿಯೊಬ್ಬರೂ ಸಂತೋಷವಾಗಿರಬೇಕು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿದೆ ಎಂದು ಹೇಳಿದರು.
ಭಯೋತ್ಪಾದನೆಗೆ ಸಹಾಯ ಮಾಡಿ ತರಬೇತಿ ನೀಡುವ ನಮ್ಮ ನೆರೆಹೊರೆಯ ದೇಶ (ಪಾಕಿಸ್ತಾನವನ್ನು ಹೆಸರಿಸದೆ) ಇದು ಅವರಿಗೆ ಮಾತ್ರವಲ್ಲ ವಿಶ್ವ ಸಮುದಾಯಕ್ಕೂ ಕೆಟ್ಟದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಭಾರತ ನೆರೆಯ ರಾಷ್ಟ್ರಗಳೊಂದಿಗೆ ಸದಾಕಾಲ ಉತ್ತಮ ಸ್ನೇಹ ಸಂಬಂಧ ಬಯಸುತ್ತದೆ ಎಂದು ಉಪರಾಷ್ಟ್ರಪತಿ ಒತ್ತಿ ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 