ಇಂದಿನ ಯುಗದಲ್ಲಿ ಎಷ್ಟು ಓದಿದರೂ ಕಡಿಮೆ: ಬಸವರಾಜ ಪಣದಿ
No matter how much you read in today's age, it is less
ಬೆಟಗೇರಿ 31: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಾಲಾ ಮಕ್ಕಳಿಗೆ ಸಾಮಾನ್ಯ ಜ್ಞಾನ ಅವಶ್ಯಕವಾಗಿದೆ. ಇಂದು ಶಾಲಾ ಮಕ್ಕಳು ಎಷ್ಟು ಓದಿದರೂ ಕಡಿಮೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಮತ್ತು ಸ್ಥಳೀಯ ಗ್ರಾಪಂ ಗ್ರಂಥಾಲಯ ಸಹಯೋಗದಲ್ಲಿ 75ನೇ ವರ್ಷದ ಸಂವಿಧಾನ ಸಂಭ್ರಮ ದಿನಾಚರಣೆ ಪ್ರಯುಕ್ತ ಸ್ಥಳೀಯ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ನಡೆದ ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಹಾಗೂ ಕಿಶೋರಿಗಾಗಿ ಆಯೋಜಿಸಿದ ನನ್ನ ಕನಸುಗಳು ಕಾರ್ಯಕ್ರಮದಲ್ಲಿ ನೇತೃತ್ವ ವಹಿಸಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ, ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಶಾಲಾ ಮಕ್ಕಳು ತಪ್ಪದೇ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮನೋಭಾವ ಬೆಳಸಿಕೊಳ್ಳಬೇಕು ಎಂದರು.
ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಲ್ಲಿಯ ಸರಕಾರಿ ಪ್ರೌಢ ಶಾಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಶೈಕ್ಷಣಿಕವಾಗಿ ವಿವಿಧ ಸಹಾಯ, ಸೌಲಭ್ಯ ಕಲ್ಪಿಸುತ್ತಿರುವ ಸ್ಥಳೀಯ ಗ್ರಾಮ ಪಂಚಾಯ್ತಿದವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಬೆಟಗೇರಿ ಗ್ರಾಮ ಪಂಚಾಯ್ತಿ ಮತ್ತು ಗ್ರಾಪಂ ಗ್ರಂಥಾಲಯ ವತಿಯಿಂದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ, ಪ್ರಮಾಣ ಪತ್ರ ವಿತರಿಸಲಾಯಿತು.
ಇಲ್ಲಿಯ ಗ್ರಾಪಂ ಕಾರ್ಯದರ್ಶಿ ಎಮ್.ಪಿ.ತಳವಾರ ಪ್ರಕಾಶ ಕುರಬೇಟ, ವೈ.ಎಮ್.ವಗ್ಗರ, ಗಣಪತಿ ಭಾಗೋಜಿ, ಶುಭಾ.ಬಿ., ಈಶ್ವರ ಮುನ್ನೋಳ್ಳಿ, ಭಾಗ್ಯಶ್ರೀ ನಾಯ್ಕ, ಸಿರಾಜ ಜಿಡ್ಡಿಮನಿ, ಸೌಮ್ಯಶ್ರೀ ಗಂಗಾ, ನೇಹಾ ಕೊಳವಿ, ಶೋಭಾ ದಂಡಿನ, ಆನಂದ ಬಡಿಗೇರ, ಮಂಜುನಾಥ ಸವತಿಕಾಯಿ, ಅತಿಥಿ ಶಿಕ್ಷಕರು, ಗ್ರಾಪಂ ಕರ ವಸೂಲಿಗಾರ ಸುರೇಶ ಬಾಣಸಿ, ವಿಠಲ ಚಂದರಗಿ, ಲಕ್ಕಮ್ಮ ಚಂದರಗಿ, ಶಿವಾನಂದ ಐದುಡ್ಡಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 