ಜಾತಿ ಗಣತಿಗೆ ಯಾರೂ ವಿರೋಧಿಸಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
No one opposed the caste census: CM Siddaramaiah
ಬೆಂಗಳೂರು 18: 'ಜಾತಿ ಗಣತಿ' ಎಂದು ಜನಪ್ರಿಯವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಬಗ್ಗೆ ಚರ್ಚಿಸಲು ಗುರುವಾರ ಸಂಜೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಯಾರೂ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
"ನಿನ್ನೆ, ಜಾತಿ ಗಣತಿ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಯಿತು. ಚರ್ಚೆ ಅಪೂರ್ಣವಾಗಿದೆ ಮತ್ತು ಅದನ್ನು ಇನ್ನೊಂದು ದಿನಕ್ಕೆ ಮುಂದೂಡಲಾಗಿದೆ. ಈ ವಿಷಯವನ್ನು ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಯಾರೂ ಅದನ್ನು ವಿರೋಧಿಸಿಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೂಡ ಸಂಪುಟ ಸಭೆಯಲ್ಲಿ ಯಾವುದೇ ಆಕ್ರಮಣಕಾರಿ ವಾದಗಳನ್ನು ತಳ್ಳಿಹಾಕಿದ್ದಾರೆ.
ನಾವು ನಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದೇವೆ ಅಷ್ಟೇ. ಏರು ಧ್ವನಿ ಅಥವಾ ವಾಗ್ವಾದ, ಅಂತಹದ್ದೇನೂ ನಡೆದಿಲ್ಲ. ಸಲಹೆಗಳನ್ನು ನೀಡಲಾಯಿತು. ಅದನ್ನು ಹೊರತುಪಡಿಸಿ ಯಾವುದೇ ನಿರ್ಧರ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 