ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತಾಡಕೂಡದು: ಬಿಎಸ್ವೈ
ಶಿವಮೊಗ್ಗ 18: ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದರೆ ಹೋರಾಟ ಮಾಡಿ ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳಬೇಕೇ ವಿನಃ ಪ್ರತ್ಯೇಕ ರಾಜ್ಯ ಕೂಗು ಸಮಸ್ಯೆಗೆ ಪರಿಹಾರವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿರುವ ಅವರು, ಪ್ರತ್ಯೇಕ ರಾಜ್ಯ ಕುರಿತು ಯಾರೂ ಮಾತನಾಡಬಾರದು. ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದರೆ, ಹೋರಾಟ ಮಾಡಿ ಕೆಲಸ ಮಾಡಿಸಿಕೊಳ್ಳಲಿ. ಉತ್ತರ ಕನರ್ಾಟಕ ಭಾಗದ ಅಭಿವೃದ್ಧಿ ಮಾಡುವಂತೆ ಆಗ್ರಹಿಸಲಿ. ಸಮಸ್ಯೆಗಳಿಗೆ ಪ್ರತ್ಯೇಕ ರಾಜ್ಯ ಕೂಗು ಪರಿಹಾರವಲ್ಲ. ಯಾವುದೇ ಪಕ್ಷವಾದರೂ ಹೀಗೆ ಹೇಳಿದರೂ ಅದು ತಪ್ಪು ಎಂದು ಹೇಳಿದ್ದಾರೆ.
ಬಳಿಕ ಕಾಂಗ್ರೆಸ್ ನಾಯಕರ ಐಫೋನ್ ಉಡುಗೊರೆ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿರುವ ಅವರು, ನಮ್ಮ ಸಂಸದರು ಉಡುಗೊರೆಗಳನ್ನು ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸಕರ್ಾರ ರಾಜ್ಯದ ಆಂತರಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಇದರಿಂದ ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಯಲಿದೆ. ಅಲ್ಲದೆ, ಕಳೆದ ಸಕರ್ಾರದ ಅವಧಿಯ ಆಡಳಿತ ಕೂಡ ತಿಳಿಯುತ್ತದೆ ಎಂದಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 