ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತಾಡಕೂಡದು: ಬಿಎಸ್ವೈ
ಶಿವಮೊಗ್ಗ 18: ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದರೆ ಹೋರಾಟ ಮಾಡಿ ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳಬೇಕೇ ವಿನಃ ಪ್ರತ್ಯೇಕ ರಾಜ್ಯ ಕೂಗು ಸಮಸ್ಯೆಗೆ ಪರಿಹಾರವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿರುವ ಅವರು, ಪ್ರತ್ಯೇಕ ರಾಜ್ಯ ಕುರಿತು ಯಾರೂ ಮಾತನಾಡಬಾರದು. ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದರೆ, ಹೋರಾಟ ಮಾಡಿ ಕೆಲಸ ಮಾಡಿಸಿಕೊಳ್ಳಲಿ. ಉತ್ತರ ಕನರ್ಾಟಕ ಭಾಗದ ಅಭಿವೃದ್ಧಿ ಮಾಡುವಂತೆ ಆಗ್ರಹಿಸಲಿ. ಸಮಸ್ಯೆಗಳಿಗೆ ಪ್ರತ್ಯೇಕ ರಾಜ್ಯ ಕೂಗು ಪರಿಹಾರವಲ್ಲ. ಯಾವುದೇ ಪಕ್ಷವಾದರೂ ಹೀಗೆ ಹೇಳಿದರೂ ಅದು ತಪ್ಪು ಎಂದು ಹೇಳಿದ್ದಾರೆ.
ಬಳಿಕ ಕಾಂಗ್ರೆಸ್ ನಾಯಕರ ಐಫೋನ್ ಉಡುಗೊರೆ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿರುವ ಅವರು, ನಮ್ಮ ಸಂಸದರು ಉಡುಗೊರೆಗಳನ್ನು ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಸಕರ್ಾರ ರಾಜ್ಯದ ಆಂತರಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಇದರಿಂದ ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಯಲಿದೆ. ಅಲ್ಲದೆ, ಕಳೆದ ಸಕರ್ಾರದ ಅವಧಿಯ ಆಡಳಿತ ಕೂಡ ತಿಳಿಯುತ್ತದೆ ಎಂದಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 