ತಮ್ಮ ಪರ ಮತ ಹಾಕುವಂತೆ ಒತ್ತಡ ಹೇರಿಲ್ಲ : ಮೇಯರ್ ಗೌತಮ್ ಕುಮಾರ್
ಬೆಂಗಳೂರು, ಅ2: ಮೇಯರ್ ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸುವಂತೆ ಯಾರ ಮೇಲೂ ಒತ್ತಡ ಹೇರಿಲ್ಲ ಎಂದು ಮಹಾಪೌರರಾದ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಯಾರ ಪರವಾಗಿ ಮತ ಚಲಾಯಿಸಬಹುದು.
ಇಂತವರಿಗೆ ಮತದಾನ ಮಾಡಿ ಎಂದು ಒತ್ತಾಯ ಮಾಡಲು ಆಗುವುದಿಲ್ಲ ಎಂದರು. ಪ್ರಜಾಪ್ರಭುತ್ವದಲ್ಲಿ ಯಾರಿಗೂ ಒತ್ತಾಯ ಮಾಡಲು ಆಗುವುದಿಲ್ಲ. ಬಿಬಿಎಂಪಿಯಲ್ಲಿ ಈ ಹಿಂದೆ ಜೆಡಿಎಸ್ ಮೋಸ ಆಗಿದೆ. ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಬೇಸರ ಆಗಿತ್ತು. ಹೀಗಾಗಿ ಅವರು ಮತದಾನ ಮಾಡಿಲ್ಲ ಎಂದರು. ನಾವು ಬಿಬಿಎಂಪಿಯಲ್ಲಿ ಆಪರೇಷನ್ ಕಮಲ ಮಾಡಿಲ್ಲ, ಯಾರಿಗೂ ಒತ್ತಾಯವನ್ನೂ ಮಾಡಿಲ್ಲ. ಆದರೂ ಮತದಾನ ಮಾಡಿ ತಮ್ಮ ಗೆಲುವಿಗೆ ಸಹಕರಿಸಿದ್ದಾರೆ. ಪ್ರೀತಿ, ವಿಶ್ವಾಸಕ್ಕೆ ಬೆಲೆಕೊಟ್ಟು ಎಲ್ಲಾ ಸದಸ್ಯರು ಮತದಾನ ಮಾಡಿದ್ದಾರೆ. ನಾವು ಯಾರಿಗೂ ಯಾವುದೇ ಆಮಿಷ ಒಡ್ಡಿಲ್ಲ. ಬೆಂಗಳೂರು ಅಭಿವೃದ್ಧಿಯೇ ತಮ್ಮ ಗುರಿ ಎಂದು ಗೌತಮ್ ಕುಮಾರ್ ಸ್ಪಷ್ಟಪಡಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 