ಬಿಹಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಶ್ನೆಯೇ ಇಲ್ಲ: ನಿತೀಶ್
ಪಾಟ್ನಾ, ಜ 13: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಹಾರದಲ್ಲಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಮತ್ತೊಮ್ಮೆ ಸಮಗ್ರವಾಗಿ ಚರ್ಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಸಿಎಎ ಜಾರಿಗೆ ಮಿತ್ರಪಕ್ಷದಲ್ಲೇ ಒಡಕು ಇದೆ ಎಂಬ ಸಂದೇಶ ರವಾನಿಸಿದ್ದಾರೆ.ಬಿಹಾರದಲ್ಲಿ ಎನ್ ಆರ್ ಸಿ ಜಾರಿಯ ಪ್ರಶ್ನೆಯೂ ಇಲ್ಲ ಎಂದಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಿಎಎ ಬಗ್ಗೆ ಚರ್ಚೆ ನಡೆಯಬೇಕು. ಎಲ್ಲರೂ ಬಯಸುವುದಾದರೆ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಯಾಗಲಿ ಎಂದರು.ಎನ್ ಆರ್ ಸಿ ಬಗ್ಗೆ ಮಾತನಾಡುವುದಾದರೆ ಎನ್ ಆರ್ ಸಿ ಜಾರಿಯ ಪ್ರಶ್ನೆಯೇ ಇಲ್ಲ ಮತ್ತು ಅದನ್ನು ಸಮರ್ಥಿಸುವುದೂ ಇಲ್ಲ ಎಂದು ಕುಮಾರ್ ಸ್ಪಷ್ಟಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 