ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ: ಬಿತ್ತನೆ ಬೀಜ ಸರಬರಾಜು ಮಾಡುವಾಗ ಅಧಿಕಾರಿಗಳಿಂದ ಪಾಸ್ ಪಡೆಯಿರಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು, ಮಾ. 27, ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ರೈತರು ಬೆಳೆದ ಬೆಳೆಗಳನ್ನು ಕೊಯ್ಲು ಮಾಡಲು, ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮುಂಗರು ಪ್ರಾರಂಭವಾದರೆ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು ಸಾಗಾಣಿಕೆ ಮಾಡಲು ಅಗತ್ಯ ವಸ್ತುಗಳ ಕಾಯ್ದೆ ಅಡಿ ತಂದಿದ್ದು, ಈ ಸಂಬಂಧ ರಾಜ್ಯದ ಎಲ್ಲಾ ಕೃಷಿ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಾಗೂ ಎಲ್ಲಾ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಇತರೆ ಭಾಗಗಳಲ್ಲಿ ಭತ್ತ ಬೆಳೆದ ರೈತರು ಅದರ ಕೊಯ್ಲಿಗೆ ಹೊರ ರಾಜ್ಯದಿಂದ ಕೊಯ್ಲು ಯಂತ್ರ ತರಬೇಕಾಗುತ್ತದೆ ಎಂಬ ಆತಂಕದಲ್ಲಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದು ಬೇಡ. ಬಿತ್ತನೆ ಮಾಡಲಾಗಲೀ ಅಥವಾ ಕೊಯ್ಲು ಮಾಡಲಾಗಲಿ ರೈತರಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ರೈತರು ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಬಿತ್ತನೆ ಕಾರ್ಯ ಕೃಷಿ ಕಾರ್ಯದಲ್ಲಿ ತೊಡಗಬಹುದು. ರೈತರ ಕೃಷಿ ಚಟುವಟಿಕೆಗಳಿಗೆ ಯಾರೂ ಸಹ ತೊಂದರೆ ಮಾಡಬಾರದು. ಯಂತ್ರೋಪಕರಣ ತಂದು ಕೊಯ್ಲು ಕೃಷಿ ಚಟುವಟಿಕೆ ಮಾಡುವ ಮುನ್ನ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು. ಕೃಷಿ ಚಟುವಟಿಕೆ ಮಾಡುವಾಗ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬಿತ್ತನೆ ಬೀಜ ಮತ್ತು ಫಸಲು ಸರಬರಾಜು ಮಾಡುವಾಗ ಇಲಾಖಾಧಿಕಾರಿಗಳಿಂದ ಸರಬರಾಜು ಮಾಡುವ ವಾಹನಗಳಿಗೆ ಕೃಷಿಕರು ಪಾಸ್ ಪಡೆಯಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 