ಹಂಪಿಯಲ್ಲಿ ಭೂಕಂಪನವಾಗಿಲ್ಲ: ಜಿಲ್ಲಾಧಿಕಾರಿ ನಕುಲ್ ಸ್ಪಷ್ಟನೆ
ಹೊಸಪೇಟೆ, ಜೂ.5,ಜಿಲ್ಲೆಯ ವಿಶ್ವ ಪಾರಂಪರಿಕ ತಾಣವಾದ ಹಂಪಿ ಸುತ್ತಮುತ್ತ ಶುಕ್ರವಾರ ನಸುಕಿನ ಜಾವ ಭೂಕಂಪನವಾಗಿದೆ ಎಂಬುದು ಕೇವಲ ವದಂತಿಯಷ್ಟೇ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.ಹಂಪಿ ಸುತ್ತಮುತ್ತ ಭೂಕಂಪನವಾಗಿದೆ ಎಂಬುದು ಶುದ್ಧ ಸುಳ್ಳು. ಒಂದು ವೇಳೆ ಭೂಕಂಪನವಾಗಿದ್ದರೇ ಅದರ ತೀವ್ರತೆಯ ಪ್ರಮಾಣ ದಾಖಲಾಗುತ್ತಿತ್ತು. ಆದರೆ, ಭೂಗರ್ಭ ಶಾಸ್ತ್ರಜ್ಞರು ಆ ರೀತಿಯ ಯಾವುದೇ ಘಟನೆ ಘಟಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇನ್ನು, ಹಂಪಿಯ ಕೆಲ ಸ್ಥಳೀಯರು ತಮಗೆ ಭೂಕಂಪನದ ಯಾವುದೇ ಅನುಭವವಾಗಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ .ನಸುಕಿನ ಜಾವ ಹಂಪಿ ಸುತ್ತಮುತ್ತ ಲಘು ಭೂಕಂಪನವಾಗಿದೆ ಎಂಬ ಸುದ್ದಿಯೊಂದು ಎಲ್ಲೆಡೆ ಹಬ್ಬಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 