ಹಂಪಿಯಲ್ಲಿ ಭೂಕಂಪನವಾಗಿಲ್ಲ: ಜಿಲ್ಲಾಧಿಕಾರಿ ನಕುಲ್ ಸ್ಪಷ್ಟನೆ
ಹೊಸಪೇಟೆ, ಜೂ.5,ಜಿಲ್ಲೆಯ ವಿಶ್ವ ಪಾರಂಪರಿಕ ತಾಣವಾದ ಹಂಪಿ ಸುತ್ತಮುತ್ತ ಶುಕ್ರವಾರ ನಸುಕಿನ ಜಾವ ಭೂಕಂಪನವಾಗಿದೆ ಎಂಬುದು ಕೇವಲ ವದಂತಿಯಷ್ಟೇ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.ಹಂಪಿ ಸುತ್ತಮುತ್ತ ಭೂಕಂಪನವಾಗಿದೆ ಎಂಬುದು ಶುದ್ಧ ಸುಳ್ಳು. ಒಂದು ವೇಳೆ ಭೂಕಂಪನವಾಗಿದ್ದರೇ ಅದರ ತೀವ್ರತೆಯ ಪ್ರಮಾಣ ದಾಖಲಾಗುತ್ತಿತ್ತು. ಆದರೆ, ಭೂಗರ್ಭ ಶಾಸ್ತ್ರಜ್ಞರು ಆ ರೀತಿಯ ಯಾವುದೇ ಘಟನೆ ಘಟಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇನ್ನು, ಹಂಪಿಯ ಕೆಲ ಸ್ಥಳೀಯರು ತಮಗೆ ಭೂಕಂಪನದ ಯಾವುದೇ ಅನುಭವವಾಗಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ .ನಸುಕಿನ ಜಾವ ಹಂಪಿ ಸುತ್ತಮುತ್ತ ಲಘು ಭೂಕಂಪನವಾಗಿದೆ ಎಂಬ ಸುದ್ದಿಯೊಂದು ಎಲ್ಲೆಡೆ ಹಬ್ಬಿತ್ತು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 