ಡೇಟಾ ಎಂಟ್ರಿ ಆಪರೇಟರ್ ಗಳ ನೇಮಕಕ್ಕೆ ಸೂಚನೆ
ಬೆಂಗಳೂರು, ಮೇ 7,ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಖಾಲಿ ಇರುವಂತ 1121 ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ. ರಾಜ್ಯದ ಎಲ್ಲಾ ನಾಡಕಚೇರಿಗಳಿಗೆ ಡೇಟಾ ಎಂಟ್ರಿ ಆಪರೇಟರ್ಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಟೆಂಡರ್ ಕರೆಯಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಜಿಲ್ಲಾ ಮಟ್ಟದಲ್ಲಿ ಟೆಂಡರ್ ಅನ್ನು ಕರೆಯುವ ಪ್ರಾಧಿಕಾರಿಯನ್ನಾಗಿ ಹಾಗೂ ಇ-ಟೆಂಡರ್ ಅಂತಿಮಗೊಳಿಸುವ ಹಾಗೂ ಇನ್ನಿತರೆ ಅನುಮೋದನೆಯನ್ನು ನೀಡಲು, ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿ ಸರ್ಕಾದ ಆದೇಶ ಹೊರಡಿಸಿದೆ.ಈಗಾಗಲೇ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ಜಿಲ್ಲೆಗಳಲ್ಲಿ ಸರ್ಕಾರದ ಆದೇಶದಂತೆ ಸಮಿತಿಯನ್ನು ರಚಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 