ನಸಿಂರ್ಗ್ ವಿದ್ಯಾರ್ಥಿಗಳ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ
Nursing students' oath taking ceremony
ವಿಜಯಪುರ 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ನಸಿಂರ್ಗ್ ಮಹಾವಿದ್ಯಾಲಯದಲ್ಲಿ 2024-25 ಶೈಕ್ಷಣಿಕ ವರ್ಷದ ಮೊದಲನೇ ವರ್ಷದ ಜಿ.ಏನ್.ಎಂ ಮತ್ತು ಬಿ.ಎಸ್.ಸಿ ನಸಿಂರ್ಗ್ ವಿದ್ಯಾರ್ಥಿಗಳ ದೀಪದಾನ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ಬುಧವಾರ ಕಾಲೇಜಿನಲ್ಲಿ ನಡೆಯಿತು.
ಈ ಕಾರ್ಯಕ್ರಮದಕ್ಕೆ ಚಾಲನೆ ನೀಡಿದ ಬೆಂಗಳೂರಿನ ಎಂ. ಎಸ್. ರಾಮಯ್ಯ ಇನಸ್ಟಿಟ್ಯೂಟ್ ಆಫ್ ನಸಿಂರ್ಗ್ ಕಾಲೇಜಿನ ಡೀನ್ ಮತ್ತು ಪ್ರಿನ್ಸಿಪಾಲ ಡಾ. ಸೋನಾಲಿ ಜಾಧವ ಮಾತನಾಡಿ, ನಸಿಂರ್ಗ್ ವಿದ್ಯಾರ್ಥಿಗಳು ಜೀವನ ಮತ್ತು ವೃತ್ತಿಯಲ್ಲಿ ವಹಿಸಬೇಕಾದ ಶಿಸ್ತು ಮತ್ತು ಇತರ ವೃತ್ತಿಗಳಿಗೆ ಇರುವ ನಡುವಿನ ವ್ಯತ್ಯಾಸದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಮತ್ತು ರೇಡಿಯಾಲಾಜಿಸ್ಟ್ ಡಾ. ವೀರೇಶ ಹಂಚಿನಾಳ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಿಸರ್ಚ್ ಮತ್ತು ಡೆವಲೆಪಮೆಂಟ್ ಸೆಲ್ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಿ. ಎಸ್. ಬಗಲಿ, ನಸಿಂರ್ಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ, ಬಿ.ಎಸ್ಸಿ ಮೊದಲನೆ ವರ್ಷದ ವಿದ್ಯಾರ್ಥಿಗಳ ವರ್ಗ ಸಂಯೋಜಕ ನಜೀರ ಬಳಗಾರ, ಜಿ.ಎನ್.ಎಂ ಮೊದಲನೇ ವರ್ಗದ ವಿದ್ಯಾರ್ಥಿಗಳ ವರ್ಗ ಸಂಯೋಜಕಿ ಆಶಾ ಕಣ್ಣೂರ ಮುಂತಾದವರು ಉಪಸ್ಥಿತರಿದ್ದರು.
ಉಪಪ್ರಾಚಾರ್ಯೆ ಡಾ. ಸುಚಿತ್ರಾ ರಾಟಿ ಸ್ವಾಗತಿಸಿದರು. ಡಾ. ಶ್ವೇತಾ ಜವಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಸೌಜನ್ಯ ಪರಿಚಯಿಸಿದರು. ಡಾ. ಕವಿತಾ ಕೆ. ಪ್ರತಿಜ್ಞಾವಿಧಿ ಭೋದಿಸಿದರು. ಡಾ. ಜಯಶ್ರೀ ಪೂಜಾರ ಮತ್ತು ಭಾಗ್ಯಶ್ರೀ ಬಾಗೇವಾಡಿ ನಿರೂಪಿಸಿದರು. ಬಾಪು ಖೋದ್ನಾಪುರ ವಂದಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 