ಪೋಷಣ ಅಭಿಯಾನ: ಚೊಚ್ಚಿಲು ಗರ್ಭಿಣಿಯರಿಗೆ ಸೀಮಂತ
Nutrition campaign: Babyshower for pregnant women
ಇಂಡಿ 08: ಬಾಲ್ಯ ವಿವಾಹ ಮದುವೆ ಅಲ್ಲ. ಗಂಡನ ಮನೆ ಆಸ್ತಿ ಅಂತಸ್ತಿಗೆ ಹಕ್ಕುದಾರಳಲ್ಲ ಎಂದು ಇಂಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಗುತ್ತರಿಗಿಮಠ ಅವರು ಹೇಳಿದರು.
ಇಂಡಿ ತಾಲೂಕಿನ ಗೋರಿಮಟ್ಟಿ ತಾಂಡದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ ಅಭಿಯಾನ ಚೊಚ್ಚಿಲು ಗರ್ಭಿಣಿಯರ ಸೀಮಂತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಗರ್ಭಿಣಿಯರು ಪುಷ್ಟಿ ಜಿಲೆಟ್ ಪೌಷ್ಟಿಕ ಆಹಾರ ಸೇವನೆ ಮೊಳಕೆ ಕಾಳುಗಳು ಸೇವನೆ ಮಾಡಬೇಕು ಎಂದು ಹೇಳಿದರು.ವೈದ್ಯಾಧಿಕಾರಿ ಡಾ. ಪ್ರಶಾಂತ ಮಾತನಾಡಿ ಗರ್ಭಿಣಿ ತಾಯಂದಿರು ಕನಿಷ್ಠ ಐದು ಬಾರಿ ತಪಾಸಣೆ ಮಾಡಿಸಿಕೊಳ್ಳಬೇಕು. ಹಸಿರು ತರಕಾರಿ ಸೊಪ್ಪು ಆಯಾ ಋತುಮಾನಕ್ಕನುಗುಣವಾಗಿ ಹಣ್ಣುಗಳು ಸೇವನೆ ಮಾಡುವುದು ಉತ್ತಮ ಎಂದು ಹೇಳಿದರು.
ವೈ ಎಂ ಪೂಜಾರ ಕ್ಷೇತ್ರ ಆರೋಗ್ಯ ಶಿಕ್ಷಣ ಶಿಕ್ಷಣಾಧಿಕಾರಿಗಳು ಮಾತನಾಡಿ ಗಂಡಿಗೆ 21 ವರ್ಷ ಹೆಣ್ಣಿಗೆ 18 ವರ್ಷ ವಯಸ್ಸಿನೊಳಗೆ ಬಾಲ್ಯ ವಿವಾಹ ಕಂಡುಬಂದಲ್ಲಿ ಕಾನೂನಿನ ಪ್ರಕಾರ 2 ವರ್ಷ ಜೈಲು ಶಿಕ್ಷೆ ಒಂದು ಲಕ್ಷ ರೂಪಾಯಿ ದಂಡ ಇದನ್ನು ಪ್ರಸ್ತುತ ನೆಂಟಸ್ತನಿಕೆ, ಬಿಗಸ್ತನ. ವಿವಾಹ ನಿಶ್ಚಯ ಅಪ್ರಾಪ್ತ ವಯಸ್ಸಿನಲ್ಲಿ ಕಂಡು ಬಂದಲ್ಲಿ ಈ ಕಾನೂನು ಅನ್ವಯವಾಗುವದು ಎಂದು ಅರಿವು ಮೂಡಿಸಿದರು.
ಮೇಲ್ವಿಚಾರಕಕಿ ಎಸ್ ಭಜಂತ್ರಿ ಮಾತನಾಡಿ ಬಾಲ ಗರ್ಭಿಣಿಯರು 80,000 ವಿಜಯಪುರ ಜಿಲ್ಲೆಯಲ್ಲಿ 6,000. ತಾಯಿ ಮರಣ ಶಿಶು ಮರಣ ಹೆಚ್ಚಳವಾಗುತ್ತಿದ್ದು ಬೆಳೆಯಬೇಕಾದ ಮಗಳು ಮಾನಸಿಕವಾಗಿ ದೈಹಿಕವಾಗಿ ಬೆಳವಣಿಗೆ ಹಂತದಲ್ಲಿ ಮಗಳ ಕೊರಳಿಗೆ ಕರಿಮಣಿ ಹಸಿ ಮಣಿ ತವಕ ಬೇಡ ಅನಾಹುತಗಳು ತಪ್ಪಿಸಿ ಎಂದು ಹೇಳಿದರು.ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಎಸ್ ಹೆಚ್ ಅತನೂರ. ಶಾಲಾ ಮುಖ್ಯ ಗುರುಗಳು ಎಸ್ಡಿಎಮ್ಸಿ ಅಧ್ಯಕ್ಷ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರು ತಾಯಂದಿರು ಉಪಸ್ಥಿತರಿದ್ದರು. ಎಸ್ ಕೆ ಭಜಂತ್ರಿ ಸ್ವಾಗತಿಸಿ, ನಿರೂಪಿಸಿದರು. ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 