ಔರಂಗಾಬಾದ್ ಪೂರ್ವ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡ 32 ಅಭ್ಯರ್ಥಿಗಳು
ಔರಂಗಾಬಾದ್, ಮಹಾರಾಷ್ಟ್ರ, ಅ.26: ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಮತ್ತು ಎಐಐಎಂಐಎಂ ಅಭ್ಯರ್ಥಿಯನ್ನು ಹೊರತುಪಡಿಸಿ, ಉಳಿದ 32 ಅಭ್ಯರ್ಥಿಗಳು ಔರಂಗಾಬಾದ್ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಮರಾಠವಾಡ ಪ್ರದೇಶದ 46 ಕ್ಷೇತ್ರಗಳ ಪೈಕಿ ಈ ಕ್ಷೇತ್ರದಲ್ಲಿ ಅತಿ ಹೆಚ್ಚು 34 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಜೆಪಿ ಸರ್ಕಾರದ ಕೈಗಾರಿಕಾ ಸಚಿವ ಅತುಲ್ ಸೇವ್ ಮತ್ತು ಎಐಐಎಂ ಅಭ್ಯರ್ಥಿಗಳಾದ ಡಾ. ಗಫ್ಫಾರ್ ಖಾದ್ರಿ ನಡುವೆ ನಿಕಟ ಸ್ಪರ್ಧೆ ನಡೆದಿದ್ದು, ಇದರಲ್ಲಿ ಅತುಲ್ ಅವರು 13,900 ಮತಗಳಿಂದ ಗೆದ್ದಿದ್ದಾರೆ. ಎಸ್ಪಿ, ಬಿಎಸ್ಪಿ ಮತ್ತು ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ 32 ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. ಅತುಲ್ ಸೇವ್ ಅವರು ಡಾ.ಖಾದ್ರಿ ಅವರನ್ನು ಎರಡನೇ ಬಾರಿ ಸೋಲಿಸಿ ಕ್ಷೇತ್ರವನ್ನುಉಳಿಸಿಕೊಂಡಿದ್ದಾರೆ. 2014ರ ಚುನಾವಣೆಯಲ್ಲಿ, ಅತುಲ್ ಅವರು ಶಿವಸೇನೆಯ ಅಭ್ಯರ್ಥಿಯ ವಿರುದ್ಧ 4000 ಮತಗಳ ಅಂತರದಿಂದ ಗೆದ್ದಿದ್ದರು. ಆಗ ಶಿವಸೇನೆ ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಆದಾಗ್ಯೂ, ಈ ಬಾರಿ ಬಿಜೆಪಿ ಮತ್ತು ಶಿವಸೇನೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 