ಅಧಿಕಾರಿಗಳ ಮಧ್ಯಪ್ರವೇಶ: 3 ಬಾಲ್ಯವಿವಾಹಕ್ಕೆ ಬಿತ್ತು ಬ್ರೇಕ್
ಬಳ್ಳಾರಿ, ಮೇ 21: ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ಬ್ರೇಕ್ ಬಿದ್ದಿದೆ.
ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ ಅವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಂಡವು ಪೊಲೀಸ್ ಇಲಾಖೆಯೊಡಗೂಡಿ ನಡೆಸಿದ ಕಾಯರ್ಾಚರಣೆಯಲ್ಲಿ ಮದುವೆಗೆ ಬ್ರೇಕ್ ಬಿದ್ದಿದೆ. ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಅನುಸಾರ ಕಾರ್ಯಪ್ರವೃತ್ತರಾದ ಸಿಡಿಪಿಒ ಅಮರೇಶ ಅವರು ಈ ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಕಾನೂನು ತಿಳಿವಳಿಕೆ ನೋಟಿಸ್ ನೀಡಿ ಅವರಿಂದ ಮುಚ್ಚಳಿಕೆ ಬರೆಸಿಕೊಂಡರು.ಈ ಸಂದರ್ಭದಲ್ಲಿ ಸಿಡಿಪಿಒ ಅಮರೇಶ ಅವರು ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಚಿದಾನಂದ, ಪೊಲೀಸ್ ಇಲಾಖೆಯ ನಾಗನಗೌಡ ಸೇರಿದಂತೆ ಅನೇಕರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 