ವಿಶ್ವ ವಿಖ್ಯಾತ ಮೈಸೂರು ದಸರಾಗೆ ಯಡಿಯೂರಪ್ಪಗೆ ಅಧಿಕೃತ ಆಹ್ವಾನ
ಬೆಂಗಳೂರು,ಸೆ 14 ಮೈಸೂರು ದಸರಾ ಸ್ವಾಗತ ಸಮಿತಿ ವತಿಯಿಂದ ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ , ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಶಾಸಕರಾದ ಹರ್ಷವರ್ಧನ್, ನಾಗೇಂದ್ರ ನೇತೃತ್ವದ ನಿಯೋಗ ಭೇಟಿ ಮಾಡಿ ಬಿಎಸ್ವೈಗೆ ಅಧಿಕೃತ ಆಹ್ವಾನ ನೀಡಲಾಯಿತು. ಶಾಸಕ ರಾಮ್ದಾಸ್ ಗೈರಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಮೈಸೂರಿನ ಎಲ್ಲ ಪಕ್ಷಗಳ ಶಾಸಕರೂ ಆಹ್ವಾನಿಸಿದ್ದೇವೆ. ಸೆ. 29 ರಂದು ಬೆಳಗ್ಗೆ 9 ಗಂಟೆಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಸರಾ ಉದ್ಘಾಟನೆ ನೆರವೇರಲಿದೆ. ಅಕ್ಟೋಬರ್ 8 ರವರೆಗೂ ವಿವಿಧ ಕಾರ್ಯಕ್ರಮಗಳು ನಡೆಯಲಿ ದ್ದು. ಸಮಾರಂಭಗಳಿಗೆ ಭಾಗವಹಿಸುವಂತೆ ಈಗಾಗಲೇ ರಜ್ಯಪಾಲರು ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ನೀಡಲಾಗಿದೆ ಎಂದರು. ದಸರಾ ಉತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸಲಾಗಿದ್ದು, ಯುವದಸರಾ ಉದ್ಘಾಟನೆ ನೆರವೇರಿಸಲು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ ಸಿಂಧೂ ಅವರನ್ನು ಆಹ್ವಾನಿಸಲು ಒಂದು ನಿಯೋಗ ತೆರಳಿದೆ ಎಂದರು. ವಿ.ಸೋಮಣ್ಣ ಅವರಿಗೆ ಮೈಸೂರು ಉಸ್ತುವಾರಿ ನೀಡಿರುವುದಕ್ಕೆ ಬೇಸರಗೊಂಡಿರುವ ಶಾಸಕ ಎಸ್.ಎ. ರಾಮ್ದಾಸ್ ನಿಯೋಗದ ಜೊತೆ ಕಾಣಿಸಿಕೊಂಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ರಾಮದಾಸ್ ಅವರಿಗೆ ದಸರಾ ಸಮಿತಿಯಲ್ಲಿ ಬೇರೆ-ಬೇರೆ ಜವಾಬ್ದಾರಿ ಗಳಿವೆ. ಹಾಗಾಗಿ ಅವರು ಇಂದು ತಮ್ಮ ಜೊತೆ ಬರಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು. ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹಿರಿಯರಾಗಿದ್ದು, ಅವರಿಗೆ ದಸರಾ ಆಯೋಜನೆ ಬಗ್ಗೆ ಅನುಭವವಿದೆ. ಆದ್ದರಿಂದ ತಮಗೆಲ್ಲ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 