ಒನ್ ಟೈಮ್ ಸೆಟಲ್ಮೆಂಟ್ ಅವಧಿ ವಿಸ್ತರಣೆಗೆ ಆಗ್ರಹ
ಲೋಕದರ್ಶನ ವರದಿ
ಕಂಪ್ಲಿ: ರೈತರ ಬ್ಯಾಂಕ್ ಸಾಲ ಒನ್ ಟೈಮ್ ಸೆಟಲ್ಮೆಂಟ್ ಅವಧಿಯನ್ನು ಮಾಚರ್್ 31ರತನಕ ವಿಸ್ತರಿಸುವಂತೆ ಕಿಸಾನ್ ಜಾಗೃತಿ ವಿಕಾಸ ಸಂಘದ ರಾಷ್ಟ್ರೀಯ ಅಧ್ಯಕ್ಷ ಪಿ.ಯುಗಂಧರ ನಾಯ್ಡು ಆಗ್ರಹಿಸಿದರು. ಎಸ್ಬಿಐ ಕಂಪ್ಲಿ ಶಾಖೆಯ ಮುಖ್ಯ ವ್ಯವಸ್ಥಾಪಕ ಯೋಗೇಶ್ ಕಕರ್ೇರಾ ಅವರಿಗೆ ಮನವಿ ಪತ್ರ ಸಲ್ಲಿಸಿ, 1997-2009ರ ಒಳಗಿನ ಸಾಲ ಒನ್ ಟೈಮ್ ಸೆಟಲ್ಮೆಂಟ್ ಕಾಲಾವಾಕಾಶ ಜ.31ಕ್ಕೆ ಅಂತ್ಯವಾಗುತ್ತಿದೆ. ಈ ಭಾಗದ ರೈತರು ಸಾಕಷ್ಟು ಆಥರ್ಿಕ ಸಂಕಷ್ಟದಲ್ಲಿದ್ದಾರೆ. ಸಮರ್ಪಕ ಮಳೆ ಇಲ್ಲದೆ ಬೆಳೆ ಇಳುವರಿ ಕುಂಠಿತವಾಗಿದೆ. ಮಾರುಕಟ್ಟೆಯಲ್ಲಿ ರೈತರ ಬೆಳೆಗಳಿಗೆ ಧಾರಣಿ ಇಲ್ಲದಾಗಿದೆ. ನಿರಂತರ ಬರಗಾಲ ಮತ್ತು ಬೆಳೆನಷ್ಟ, ಮಾರುಕಟ್ಟೆ ಧಾರಣಿ ಕುಸಿತದಿಂದ ರೈತರು ಕಂಗಲಾಗಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಬೆಳೆ ಮಾರಾಟವಾಗದೆ ರಾಸಿಯಲ್ಲಿಯೇ ಉಳಿದಿದೆ. ಈ ದಿಸೆಯಲ್ಲಿ ರೈತರ ಅನುಕೂಲಕ್ಕಾಗಿ ಒನ್ ಟೈಮ್ ಸೆಟಲ್ಮೆಂಟ್ನ್ನು 2019ರ ಮಾಚರ್್ 31ರತನಕ ವಿಸ್ತರಿಸುವಂತೆ ಒತ್ತಾಯಿಸಿದರು ಮನವಿ ಪತ್ರ ಸ್ವೀಕರಿಸಿದ ಎಸ್ಬಿಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಯೋಗೇಶ್ ಕಕರ್ೇರಾ ಮಾತನಾಡಿ, ರೈತರ ಅನುಕೂಲಕ್ಕಾಗಿ ರೈತರು ಸಲ್ಲಿಸಿದ ಮನವಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ರೈತರಾದ ತಿಪ್ಪಯ್ಯಸ್ವಾಮಿ, ಗಂಗಾಧರ, ಯಂಕಪ್ಪ, ಬುಜ್ಜಿಕುಮಾರ್, ಬಿ.ಭೀಮಲಿಂಗಪ್ಪ ಸೇರಿ ಅನೇಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 