ಸಾರಿಗೆ ಸಂಸ್ಥೆಗಳ ನೌಕರರ ಒಂದು ದಿನದ ವೇತನ ಸಿಎಂ ಪರಿಹಾರ ನಿಧಿಗೆ
ಬೆಂಗಳೂರು, ಏ.8, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ, ಆಧಿಕಾರಿಗಳ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಗೆ ನೀಡಲು ನಿರ್ಧರಿಸಲಾಗಿದೆ. ಕೋವಿಡ್-19 ಅನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿರುವ ಹಿನ್ನೆಲೆಯಲ್ಲಿ ಹಾಗೂ ಕೊರೊನಾ ವೈರಸ್ ನಿರ್ಮೂಲನೆಗಾಗಿ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, ಈಶಾನ್ಯ ಹಾಗೂ ವಾಯವ್ಯ ಸಾರಿಗೆ ಸಂಸ್ಥೆಗಳಿಂದ ದೇಣಿಗೆ ನೀಡಲಾಗುತ್ತಿದೆ.ಆಯಾ ನಿಗಮದ ವ್ಯಾಪ್ತಿಯ ನೌಕರರು ಹಾಗೂ ಅಧಿಕಾರಿಗಳ ಏಪ್ರಿಲ್ ತಿಂಗಳ ವೇತನದಲ್ಲಿ ಕಟಾವು ಮಾಡಿ ಮುಖ್ಯಮಂತ್ರಿಗಳ ನಿಧಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 