ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಒಂದು ಬಲಿ, 7 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 415
ಬೆಂಗಳೂರು, ಏ 21,ಮಹಾಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಇಂದು ಕಲಬುರಗಿ ಜಿಲ್ಲೆಯ ನಿವಾಸಿಯಾಗಿದ್ದ 80 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಇವರು ಕಳೆದ 4 ವರ್ಷಗಳಿಂದ ಪಾರ್ಕಿಸನ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಮೂರು ವರ್ಷಗಳಿಂದ ಹಾಸಿಗೆಯಲ್ಲಿ ಮಲಗಿಯೇ ಜೀವನ ಸಾಗಿಸುತ್ತಿದ್ದರು. ಏ. 19ರಂದು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ರಾಜ್ಯದಲ್ಲಿ ಮತ್ತೆ 7 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 415ಕ್ಕೇರಿಕೆಯಾಗಿವೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 114 ಜನರು ಗುಣಮುಖರಾಗಿದ್ದಾರೆ. ಕಲಬುರಗಿಯಲ್ಲಿ ಮೂರು ಹೊಸ ಪಪ್ರಕರಣಗಳು ಪತ್ತೆಯಾಗಿವೆ. 30,61 ಹಾಗೂ 80 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ವಿಜಯಪುರದ 18 ವರ್ಷದ ಇಬ್ಬರು ಯುವತಿಯರು, ಬಂಟ್ವಾಳ ದಕ್ಷಿಣ ಕನ್ನಡ ಜಿಲ್ಲೆಯ 67 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 