ಈರುಳ್ಳಿ ಬೆಲೆ ಮತ್ತೆ ದುಬಾರಿ , ಮತ್ತುಷ್ಟು ಕಣ್ಣೀರು.....!!!
ನವದೆಹಲಿ, ಡಿ 26,ದೇಶದ ಜನರಲ್ಲಿ ಕಣ್ಣೀರು ತರಿಸಿರುವ ಈರುಳ್ಳಿ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ. ಜನ ಈರುಳ್ಳಿ
ಹೆಸರು ಕೇಳಿದರೆ ಚಳಿಯಲ್ಲೂ ಬೆವರಿ ಬೆಚ್ಚಿ ಬೀಳುವ ಸನ್ನಿವೇಶ ನಿರ್ಮಾಣವಾಗಿದೆ.ಗಗನ ಮುಟ್ಟಿದ್ದ ಈರುಳ್ಳಿ ದರ ಸ್ವಲ್ಪಮಟ್ಟಿಗೆ ಇಳಿಕೆಯಾಗಿತ್ತು ಆದರೆ ಟರ್ಕಿ ಈರುಳ್ಳಿಯೂ ಭಾರತೀಯರಿಗೆ ಕೈಕೊಟ್ಟಿದ್ದು ಅಲ್ಲಿನ
ಸರಕಾರ ಏಕಾಏಕಿ ಈರುಳ್ಳಿ ರಫ್ತುನ್ನು ಸ್ಥಗಿತಗೊಳಿಸಲು
ನಿರ್ಧರಿಸಿದೆ ಪರಿಣಾಮ ಮತ್ತೆ ದರ ಏರಿಕೆ ಯಾಗುವ ಲಕ್ಷಣವಿದೆ. ಭಾರೀ ಪ್ರಮಾಣದಲ್ಲಿ ಭಾರತಕ್ಕೆ ಈರುಳ್ಳಿ ರಫ್ತು ಮಾಡಿದ ಕಾರಣ
ಟರ್ಕಿಯಲ್ಲೂ ಈರುಳ್ಳಿ ದರ ದಿಢೀರ್ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಆ ದೇಶವು ಈರುಳ್ಳಿ ರಫ್ತನ್ನು ಸದ್ಯದ ಮಟ್ಟಿಗೆ ನಿಲ್ಲಿಸಲು ತೀರ್ಮಾನಿಸಿದ
ಪರಿಣಾಮ ಭಾರತದಲ್ಲಿ ಈರುಳ್ಳಿಯ ದರ ಶೇ.10-15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಸದ್ಯ
ಬೆಂಗಳೂರಿನಲ್ಲಿ ಈರುಳ್ಳಿ ದರ ಕೆ.ಜಿ.ಗೆ 120ರಿಂದ 150 ರೂ. ಇದ್ದರೆ ಕೆಲವು ಕಡೆ ಇದು 180 ಗಡಿಯವರೆಗೂ ತಲುಪಿದೆ. ದರ ಏರಿಕೆ ನಂತರ ಟರ್ಕಿ, ಈಜಿಪ್ಟ್ ಹಾಗೂ ಚೀನಾದಿಂದ ಭಾರತ ಈರುಳ್ಳಿ ಆಮದು ಮಾಡಿಕೊಳ್ಳುತ್ತಿದೆ. ಇನ್ನು ಸ್ವಲ್ಲ
ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದ್ದು ಜನವರಿ
ನಂತರ ದರ ಇಳಿಕೆಯಾಗುವ, ಕೆಲ ಸುಧಾರಣೆಯಾಗುವ ಸಂಭವಿದೆ
ಎನ್ನಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 