ಜಾಹೀರಾತುಗಳಲ್ಲಿ ಮಾತ್ರ ರೈತರ ಸ್ಮರಣೆ : ಯುಪಿ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರಿಯಾಂಕಾ ವಾದ್ರಾ
ನವದೆಹಲಿ, ಅ 09: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ರೈತರನ್ನು ಕಡೆಗಣಿಸಿದ್ದು, ಕೇವಲ ಜಾಹೀರಾತುಗಳಲ್ಲಿ ಮಾತ್ರ ರೈತರನ್ನು ಸ್ಮರಿಸುತ್ತಿದೆ ಎಂದು ಆರೋಪಿಸಿದ್ದಾರೆ. ರೈತರ ಸಮಸ್ಯೆಯ ಬಗ್ಗೆ ಟ್ವಿಟರ್ ನಲ್ಲಿ ಪ್ರಸ್ತಾಪಿಸಿರುವ ಪ್ರಿಯಾಂಕಾ, ರೈತರಿಗೆ ಕಿರುಕುಳ ನೀಡಲು ಉತ್ತರ ಪ್ರದೇಶ ಸರ್ಕಾರ ಹೊಸ ವಿಧಾನ ಕಂಡುಕೊಂಡಿದೆ. ಸಾಲದ ಹೆಸರಿನಲ್ಲಿ ವಂಚಿಸುತ್ತಿರುವುದಲ್ಲದೆ, ವಿದ್ಯುತ್ ಬಿಲ್ ಹೆಸರಿನಲ್ಲಿ ಜೈಲಿಗಟ್ಟುತ್ತಿದೆ ಎಂದು ಟೀಕಿಸಿದ್ದಾರೆ. ಮಳೆ ಹಾಗೂ ಪ್ರವಾಹದಿಂದ ಬೆಳೆ ನಷ್ಟ ಎದುರಿಸುತ್ತಿರುವ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಟ್ವಿಟರ್ ಮೂಲಕ ಹರಿಹಾಯ್ದಿದ್ದಾರೆ. ಸಾಲದ ಹಿನ್ನೆಲೆಯಲ್ಲಿ ಮಹೊಬಾ ಮತ್ತು ಹಮಿರ್ ಪುರದ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾದ್ರಾ ಕೆಂಡ ಕಾರಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 