ವಿಶ್ವ ಅರ್ಥೈಟಿಸ ದಿನಾಚರಣೆ ಉದ್ಘಾಟನೆ
ಲೋಕದರ್ಶನ ವರದಿ
ಬೆಳಗಾವಿ
17: ಅಧಿಕ ಬೊಜ್ಜು ಹೊಂದಿರುವ ಆಧುನಿಕ ಮಾನವನ ಒಟ್ಟು ಜೀವಿತಾವಧಿಯ ಸುಮಾರು 40 ವರ್ಷಗಳ ನಂತರ ಶೇ. 1ರಷ್ಟು ಜನರು ವಿವಿಧ ರೀತಿಯ ಸಂಧಿವಾತಗಳಿಂದ ಬಳಲುತ್ತಾರೆ. ಪ್ರತಿದಿನ ರೋಗಿಯ ಪ್ರಾಣ ಹಿಂಡುವ ಈ ವ್ಯಾದಿಗೆ ಮಂಗಳ ಹಾಡಲು ಹಲವು ಉಪಾಯಗಳಿವೆ ಎಂದು ಕೆಎಲ್ಇ ಅಕಾಡೆಮಿ ಹೈಯರ ಎಜುಕೇಶನ & ರಿಸರ್ಚನ ಕುಲಪತಿ ಡಾ. ವಿವೇಕ ಸಾವೋಜಿ ಅವರು ತಿಳಿಸಿದರು.
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಅರ್ಥೈಟಿಸ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಂಧಿವಾತವು ಯಾವುದೇ ಲಿಂಗ, ವಯಸ್ಸಿನ ಬೇಧವಿಲ್ಲದೇ ಕಾಣಿಸಿಕೊಳ್ಳುವ ಈ ರೋಗವು ಬಾಲ್ಯಾವಸ್ಥೆಯಲ್ಲಿ ಅಪರೂಪವಲ್ಲ. ನಿಗದಿತ ಸಮಯದಲ್ಲಿ ಚಿಕಿತ್ಸೆ ಲಭಿಸದಿದ್ದರೆ ಸಂಧಿನ ತೊಂದರೆ, ಬಗೆಳವಣಿಗೆ ಕುಂಠಿತ, ಮಾನಸಿಕ ಅಸ್ವಸ್ಥತೆಗಳಿಗೆ ಎಡೆಮಾಡಿ ಕೊಡುವದಲ್ಲದೇ ಬೆನ್ನುಹುರಿ ವ್ಯಾದಿಗೆ ತುತ್ತಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಆಸ್ಪತ್ರೆಯ
ವೈದ್ಯಕೀಯ ನಿದರ್ೇಶಕರಾದ ಡಾ. ಎಂ ವಿ ಜಾಲಿ ಅವರು ಮಾತನಾಡಿ, ಸಂಧಿವಾತವು ರೋಗವಲ್ಲ. ಆದರೆ ಇದು ವಿವಿಧ ರೋಗಗಳ ತವರೂರು. ಬಹಳಷ್ಟು ರೋಗಗಳಲ್ಲಿ ಸಂಧಿನ ಪಾತ್ರ ಅತ್ಯಧಿಕ. ವಾಯು ಸಂಧಿವಾತ (ರ್ಯುಮ್ಯಾಟಾಯ್ಡ), ಎಲುಬು ಸಂಧಿವಾತ( ಅಸ್ಟಿಯೋ) ಸಣ್ಣ ಸಂಧಿನ ಸಂಧಿವಾತ( ಗೌಟ) ಬೆನ್ನೆಲುಬು ಸಂಧಿವಾತ(ಸ್ಪಾಂಡಿಲೈಟಿಸ್) ಹೀಗೆ ವಿವಿಧ ರೀತಿಯ ಸಂಧಿವಾತಗಳಿವೆ. ಖೀವು ಸಾಮಾನ್ಯವಾಗಿದ್ದು, ರಕ್ತನಾಳ ಹಾಗೂ ಸ್ನಾಯು ಕಾಯಿಲೆ ಗಂಭೀರವಾದವುಗಳು. ಸಂಪೂರ್ಣ ಗುಣಮುಖವಾಗದ ಈ ರೋಗಕ್ಕೆ ನೋವು ನಿವಾರಕ ಔಷಧಿಯೇ ಆಧಾರ ಎಂದು ವಿವರಿಸಿದರು.
ಎಲಬು ಕೀಲು ವಿಭಾಗದ ಮುಖ್ಯಸ್ಥರಾದ ಡಾ. ಶೈಲೇಶ ಉದಪುಡಿ ಅವರು, ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಈ ಸಂದರ್ಬದಲ್ಲಿ ಡಾ. ಎ ಪಿ ಹೊಗಾಡೆ, ಡಾ. ಸುಧಾ ರೆಡ್ಡಿ, ಡಾ. ಕಿರಣ ಪಾಟೀಲ, ಡಾ. ಎಸ್ ಕೆ ಸೈದಾಪೂರ, ಡಾ. ಆರ್ ಬಿ ಉಪ್ಪಿನ, ಡಾ. ರವಿ ಜತ್ತಿ, ಡಾ. ದಿನೇಶ ಕಾಳೆ, ಡಾ. ಎಸ್ ಸಿ ಸಾಣಿಕೊಪ್ಪ, ಡಾ ಸಮೀರ ಹಾವೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 