ವಿಪಕ್ಷಗಳ ಗದ್ದಲ : ರಾಜ್ಯಸಭೆ ಕಲಾಪ ಮಧ್ಯಾಹ್ನ 2ರವರೆಗೆ ಮುಂದೂಡಿಕೆ
ನವದೆಹಲಿ, ನ 19 : ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಮತ್ತು ಜವಾಹರ್ ಲಾಲ್ ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ವಿಷಯಗಳನ್ನು ಪ್ರಸ್ತಾಪಿಸಿ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಗದ್ದಲ ಎಬ್ಬಿಸಿದ ಪರಿಣಾಮ ಮಂಗಳವಾರದ ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲ್ಪಟ್ಟಿದೆ. ನಿಯಮ 267 ರ ಅಡಿ ಕೆಲವು ಸದಸ್ಯರು ನೊಟೀಸ್ ನೀಡಿದ್ದು ಅದನ್ನು ತಿರಸ್ಕರಿಸಲಾಗಿದೆ ಎಂದು ಸಭಾಪತಿ ಎಂ.ವೆಂಕಯ್ಯ ನಾಯ್ಡು ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಸಿ ಪಿ ಎಂ ಸದಸ್ಯರು ಗದ್ದಲ ಎಬ್ಬಿಸಿದರು. ಶಾಂತಿ ಕಾಪಾಡುವಂತೆ ವೆಂಕಯ್ಯನಾಯ್ಡು ಮಾಡಿದ ಮನವಿ ಫಲಿಸದ ಕಾರಣ ಕಲಾಪವನ್ನು ಮಧ್ಯಾಹ್ನ ಎರಡು ಗಂಟೆವರೆಗೆ ಮುಂದೂಡಲಾಯಿತು. ದೇಶದಲ್ಲಿನ ಆರ್ಥಿಕ ಸ್ಥಿತಿಯ ಕುರಿತು ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದರೆ, ಜವಹಾರ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ಸಂಬಂಧ ಚರ್ಚೆ ನಡೆಸುವಂತೆ ಸಿಪಿಎಮ್ ಆಗ್ರಹಪಡಿಸಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 