ರಾಜ್ಯದ ಎಲ್ಲ ಗೋಶಾಲೆಗಳಲ್ಲಿ ದೀಪೋತ್ಸವ ಆಚರಣೆಗೆ ಆದೇಶ
ಲಕ್ನೋ, ಅ, 27: ಸರಯೂ ನದಿ ತೀರದಲ್ಲಿ 4.10 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಗಿನ್ನಿಸ್ ದಾಖಲೆ ಸ್ಥಾಪಿಸಲು ಸಿದ್ಧತೆ ನಡೆದಿರುವ ನಡುವೆಯೇ ರಾಜ್ಯದ ಎಲ್ಲ ಗೋಶಾಲೆಗಳಲ್ಲಿ ಇಂಥದ್ದೇ ದೀಪೋತ್ಸವ ಹಮ್ಮಿಕೊಳ್ಳುವಂತೆ ಉತ್ತರ ಪ್ರದೇಶದ ಗೋಸೇವಾ ಆಯೋಗ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆಯೋಗದ ಆದೇಶದ ಹಿನ್ನೆಲೆಯಲ್ಲಿ ಗೋಶಾಲೆಗಳಲ್ಲಿ ನಡೆಸುವ ದೀಪೋತ್ಸವದ ಬಗ್ಗೆ ವೀಡಿಯೊ ದಾಖಲೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. "ಗೋವುಗಳನ್ನು ದೀಪಾವಳಿ ಬಳಿಕ ಪೂಜಿಸಲಾಗುತ್ತದೆ. ಆದ್ದರಿಂದ ಗೋಶಾಲೆಗಳಲ್ಲಿ ದೀಪೋತ್ಸವ ಆಚರಿಸಬೇಕು ಎಂದು ಗೋಸೇವಾ ಆಯೋಗದ ಅಧ್ಯಕ್ಷ ಶ್ಯಾಮ್ನಂದನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ನೂರಾರು ಗೋಶಾಲೆಗಳು ಇರುವ ಹಿನ್ನೆಲೆಯಲ್ಲಿ ಅಯೋಗದ ಸೂಚನೆಯಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ. ಲಕ್ಷಾಂತರ ಹಣತೆಗಳ ಖರೀದಿಗೆ ಹಾಗೂ ನೂರಾರು ಲೀಟರ್ ಸಾಸಿವೆ ಎಣ್ಣೆಯನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಖರೀದಿಸಲು ಇಷ್ಟೊಂದು ಅಲ್ಪಾವಧಿಯಲ್ಲಿ ಸಂಪನ್ಮೂಲ ಎಲ್ಲಿಂದ ಸಂಗ್ರಹ ಮಾಡಬೇಕು ಎನ್ನುವುದು ಅಧಿಕಾರಿಗಳ ಚಿಂತೆ. ಆಯೋಗದ ನಿರ್ದೇಶನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಗೋ ದೀಪಾವಳಿಗೆ ಅಗತ್ಯ ಪರಿಕರಗಳನ್ನು ಒದಗಿಸಿಕೊಡುವ ಅನಿವಾರ್ಯತೆಗೆ ಸಿಲುಕಿ ಕೊಂಡಿದೆ. ಮೇವು ಖರೀದಿಗೇ ಹಣಕಾಸು ಮುಗ್ಗಟ್ಟು ಇರುವಾಗ , ಹಣತೆ ಮತ್ತು ಎಣ್ಣೆ ಖರೀದಿಗೆ ಎಲ್ಲಿಂದ ಹಣ ಸಂಗ್ರಹ ಮಾಡುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 