ಸಮಾಜದ ಅಭಿವೃದ್ಧಿಗೆ ಸಂಘಟನೆ ಅಗತ್ಯ: ಕಾಂಚನ ಕುಮಾರ್
Organization is necessary for the development of society: Kanchana Kumar
ಹೂವಿನ ಹಡಗಲಿ 26: ಬಣಜಿಗ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಸಂಘಟನಾ ಕಾರ್ಯದರ್ಶಿ ಕಾಂಚನ ಕುಮಾರ್ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಎಂ ಬಿ ಆಯಿಲ್ ಮಿಲ್ ನಲ್ಲಿ ಮಂಗಳವಾರ ತಾಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಮಾಜಿಕವಾಗಿ ಸದೃಢವಾಗಿ ಬೆಳೆಯಲು ಸಂಘಟನೆ ಅಗತ್ಯ ಜತೆಗೆ ರಾಜಕೀಯ ಸ್ಥಾನ ಮಾನ ಸಿಗಬೇಕು ಎಂದರು. ಬಣಜಿಗ ಸಮಾಜದ ತಾಲೂಕು ಅಧ್ಯಕ್ಷ ಮುಂಡವಾಡ ಉಮೇಶ ಅಧ್ಯಕ್ಷತೆ ವಹಿಸಿಸಮಾಜದ ಏಳಿಗೆಗೆ ಸದಾ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿರಿ ಎಂದರು.
ಗೌರವಾಧ್ಯಕ್ಷ ರುದ್ರ್ಪ ಕರಿಶೆಟ್ಟಿ ರಾಜ್ಯ ಬಣಜಿಗ ವಿಶ್ವಸ್ಥ ಮಂಡಳಿ ಸದಸ್ಯ ಮುರುಗೇಶ ತುರಕಾಣಿ, ಹಿರೇಹಡಗಲಿ ಘಟಕದ ಅಧ್ಯಕ್ಷ ಶಿವಯೋಗೆಪ್ಪ ಹಲಗೇರಿ ಗಿರಿಮಲ್ಲಿಗೆ ಮಹಿಳಾ ಸಹಕಾರಿಯ ಅಧ್ಯಕ್ಷ ಸವಿತಾ ಅಂಗಡಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಯಲಗಚ್ಚಿನಯುವ ಘಟಕದ ಅಧ್ಯಕ್ಷ ಐ ಎಸ್ ವಿಜಯಕುಮಾರ್ ಇದ್ದರು. ಕುಂಬಾರಿ ಸವಿತಾ, ನಾಗರತ್ನ ಕುಂಚೂರು, ಎ ಭುವನೇಶ್ವರಿ ಶೈಲಜಾ ಪವಾಡಶೆಟ್ರು ನಿರ್ವಹಿಸಿದರು. ತಾಲೂಕಿನ ವಿವಿಧ ಗ್ರಾಮಗಳ ಸಮಾಜದ ಬಾಂಧವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 