ನಮ್ಮ ಸಂವಿಧಾನವು ಪ್ರಪಂಚದಲ್ಲಿಯೇ ಸರ್ವಶ್ರೇಷ್ಠವಾದುದು
Our Constitution is the best in the world.
ಲೋಕದರ್ಶನ ವರದಿ
ಗೋಕಾಕ 16 : ಭಾರತೀಯರಲ್ಲಿ ಸಮಾನತೆಯನ್ನು ಕಂಡುಕೊಳ್ಳಲು ಅಂಬೇಡ್ಕರ್ ಅವರು ಸತತ ಪರಿಶ್ರಮಸಿ ಸಂವಿಧಾನ ನೀಡಿದ್ದಾರೆ.ಅದು ಪ್ರಪಂಚದಲ್ಲಯೇ ಸರ್ವಶ್ರೇಷ್ಠವಾದುದು. ಎಂದು ಗೋಕಾಕದ ಸಾಹಿತಿ ಹಾಗೂ ಸಿದ್ದಾರ್ಥ ಲಲಿತ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಜಯಾನಂದ ಮಾದರ ಹೇಳಿದರು. ಅವರು ಸಮೀಪದ ಸಿಂಧಿಕುರಬೇಟ ಅಂಬೇಡ್ಕರ್ ನಗರದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ ಆರ್ ಅಂಬೇಡ್ಕರ್ ಅವರ 135ನೆಯ ಜಯಂತಿ ಉತ್ಸವದ ಸಂದರ್ಭದಲ್ಲಿ ಉಪನ್ಯಾಸ ನೀಡುತ್ತಾ ಮೇಲು ಕೀಳೀನ ವರ್ಣಭೇದಗಳನ್ನು ಹೋಗಲಾಡಿಸುವುದೇ ಅಂಬೇಡ್ಕರ್ ಅವರ ಧ್ಯೇಯವಾಗಿತ್ತು ಸತತ ಅಧ್ಯಯನ ಶೀಲತೆಯಿಂದ ಸಂವಿಧಾನವನ್ನು ರಚಿಸಿ ನಮ್ಮೆಲ್ಲರಿಗೆ ಉಡುಗೊರೆಯಾಗಿ ನೀಡಿದಂಥ ಅಮೂಲ್ಯವಾದ ಸಂವಿಧಾನವು ಸರ್ವರ ಏಳಿಗೆಯನ್ನೇ ಬಯಸುತ್ತದೆ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಭಾರತದ ಭವಿಷ್ಯ ಅಡಗಿದೆ ಸಾಮಾಜಿಕ ಹಾಗೂ ಶೈಕ್ಷಣಿಕ ಪರಿವರ್ತನೆಯಿಂದ ಭಾರತದ ಅಭ್ಯುದಯ ಹೊಂದಲು ಸಾಧ್ಯವೆಂದು ಹೇಳಿದರು. ಮಹಾಲಿಂಗಪ್ಪ ಕೆಳಗೇರಿ, ಪರಸಪ್ಪ ಪೂಜಾರಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಗಣ್ಯಮಾನ್ಯರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 