ನಮ್ಮ ಯೋಧರು. ನಮ್ಮ ಹೆಮ್ಮೆ: ಡಾ ವೀಣಾ ಬಿರಾದಾರ
Our warriors. Our pride: Dr. Veena Biradar
ಧಾರವಾಡ 08: ಇಂದು ನಗರದ ಸಾಯಿ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವೀರ ನಾರಿ ರತ್ನ ಪ್ರತಿಷ್ಠಾನ ಸಂಸ್ಥೆಯು ಆಪರೇಷನ್ ಸಿಂಧೂರ ಜೈ ಹೋ ವಿಜಯೋತ್ಸವ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವೀರ ನಾರಿ ರತ್ನ ಪ್ರತಿಷ್ಠಾನದ ಗೌರವ ಅಧ್ಯಕ್ಷ ಡಾ ವೀಣಾ ಬಿರಾದಾರ ಅವರು ಮಾತನಾಡಿ, ನಮ್ಮ ಹೆಮ್ಮೆಯ ಭಾರತೀಯ ಸೈನಿಕರು ಆಪರೇಷನ್ ಸಿಂಧೂರ್ ನಡೆಸಿ, ಪಾಕ್ ಉಗ್ರರನ್ನು ಸೆದೆ ಬಡಿದು ವಿಜಯಶಾಲಿಯಾಗಿದ್ದಾರೆ. ನಮ್ಮ ಭಾರತೀಯ ಸೈನಿಕರು ನಮ್ಮೆಲ್ಲರ ಹೆಮ್ಮೆ ಎಂದು ಹೇಳಿದರು.
ವಿಜಯದ ಸಂಭ್ರಮಾಚರಣೆಯನ್ನು ಇಂದು ಶ್ರೀ ಸಾಯಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವೀರನಾರಿ ರತ್ನ ಪ್ರತಿಷ್ಠಾನದ (ವೀರ ಯೋಧರ ಪತ್ನಿಯರ ಸಂಘ, ಧಾರವಾಡ) ಎಲ್ಲಾ ಸಹೋದರಿಯರು ಸೇರಿ ಆಚರಿಸಿದರು. ಸಿಹಿ ಹಂಚಿ, ಸಂಭ್ರಮಪಟ್ಟರು.ಅಧ್ಯಕ್ಷರಾದ ಅನ್ನಪೂರ್ಣ, ಕಾರ್ಯದರ್ಶಿ ಪುಷ್ಪಾ, ಚೇತನಾ, ಮಂಜುಳಾ, ಹೇಮಾ, ಲಕ್ಷ್ಮೀ ಇನ್ನಿತರರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 