ಮಾ 17 ರಂದು ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ
ನವದೆಹಲಿ, ಜ 29 : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಬರುವ ಮಾರ್ಚ್ 17ರಂದು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ.
ಬಂಗಬಂಧು ಶೇಖ್ ಮುಜೀಬುರ್ರಹ್ಮಾನ್ ಜನ್ಮಶತಮಾನೋತ್ಸವಕ್ಕೆ ಚಾಲನೆ ನೀಡುವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.
ಉಭಯ ದೇಶಗಳ ನಡುವಿನ ಆತ್ಮೀಯ ದ್ವಿಪಕ್ಷೀಯ ಸಂಬಂಧವನ್ನು ಬಿಂಬಿಸುವುದು ಇದರ ಉದ್ದೇಶವಾಗಿದೆ ಕಾರ್ಯಕ್ರಮದ ಹಿಂದಿನ ದಿನವೇ ಢಾಕಾ ತಲುಪಲಿರುವ ಮೋದಿ, ಬಾಂಗ್ಲಾದೇಶದ ಸಂಸ್ಥಾಪಕ ಮುಜೀಬುರ್ರಹ್ಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಲಿದ್ದಾರೆ.
ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಸಂಘರ್ಷ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭೇಟಿ ಕುತೂಹಲ ತೀವ್ರ ಕೆರಳಿಸಿದೆ. ಭಾರತದ ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆ ಅನುಮೋದನೆ ಪಡೆದ ನಂತರ ಬಾಂಗ್ಲಾದೇಶದ ಮೂವರು ಸಚಿವರು ಭಾರತ ಪ್ರವಾಸ ರದ್ದುಪಡಿಸಿದ್ದಾರೆ.
ಆದರೆ ಸಿಎಎ ಭಾರತದ ಆಂತರಿಕ ವಿಚಾರ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಗಲ್ಫ್ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 