'ಪಿಎಂಜಿ ದಿಶಾ' ಡಿಜಿಟಲ್ ಸಾಕ್ಷರತಾ ಅಭಿಯಾನ
ಲೋಕದರ್ಶನ ವರದಿ
ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಎನ್.ಆರ್ ಠಕ್ಕಾಯಿ ಮಾತನಾಡಿ ಇಂದು ಡಿಜಿಟಲ್ ಸಾಕ್ಷರತೆಯಿಂದ ಅನೇಕ ಪ್ರಯೋಜನಗಳಿದ್ದು ಮನೆಯಲ್ಲಿದ್ದುಕೊಂಡೇ ಸುಲಭವಾಗಿ ಸಾಕಷ್ಟು ಸೇವಾ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ತರಬೇತುದಾರ ಮುಷ್ತಾಕಲಿ ಮುಲ್ಲಾ ಮಾತನಾಡಿ ಗ್ರಾಮೀಣ ವಿದ್ಯಾರ್ಥಿ ಗಳಿಗಾಗಿ ಇದೊಂದು ಉತ್ತಮ ಯೋಜನೆಯಾಗಿದ್ದು 14 ವರ್ಷ ತುಂಬಿದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ 20 ಗಂಟೆಗಳ ತರಬೇತಿಯನ್ನು ನೀಡುವುದಲ್ಲದೇ ಕೊನೆಯಲ್ಲಿ ಆನ್ಲೈನ್ ಪರೀಕ್ಷೆ ನಡೆಸಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರ ಕೊಡಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಎ.ಎಚ್ ಪಾಟೀಲ, ಆರ್. ಸಿ ಸೊರಟೂರ, ಎಸ್.ಬಿ ಭಜಂತ್ರಿ ಹಾಗೂ ವಿದ್ಯಾಥರ್ಿಗಳು ಹಾಜರಿದ್ದರು. ಪಿ.ಎಸ್ ಗುರುನಗೌಡರ ನಿರೂಪಿಸಿದರು. ಐ.ಎಸ್ ಮುದಗಲ್ ವಂದಿಸಿದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 