ರೌಡಿಶೀಟರ್ ಗುಂಡನ ಮೇಲೆ ಗುಂಡೇಟು
ಬೆಂಗಳೂರು, ಫೆ 22 : ರೌಡಿಶೀಟರ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ನಗರದ ಬಾಗಲಗುಂಟೆ ಠಾಣಾ ವ್ಯಾಪ್ತಿಯ ಮಲ್ಲಸಂದ್ರದ ಬಳಿ ನಡೆದಿದೆ.ತುಮಕೂರು ಜಯನಗರ ರೌಡಿಶೀಟರ್ ಮೇಲೆ ಫರ್ನಾಂಡೀಸ್ ಅಲಿಯಾಸ್ ಗುಂಡ ನ ಮೇಲೆ ಗುಂಡು ಹಾರಿಸಿ, ಬಂಧಿಸಲಾಗಿದೆ.ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ಬೆಂಗಳೂರು- ತುಮಕೂರು ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು.ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲು ತೆರಳಿದಾಗ, ಫರ್ನಾಂಡೀಸ್ ಪೊಲೀಸರ ಮೇಲೆಯೇ ಮಾರಣಾಂತಕ ಹಲ್ಲೆ ಮಾಡಿದ್ದಾನೆ. ಹೀಗಾಗಿ ಆತ್ಮರಕ್ಷಣೆಗಾಗಿ ತುಮಕೂರು ತಿಲಕ್ ಪಾರ್ಕ್ ಪೊಲೀಸ್ ಇನ್ಸ್ ಪೆಕ್ಟರ್ ಪಾರ್ವತಮ್ಮ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.ಆರೋಪಿ ರೌಡಿಶೀಟರ್ 14ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದನು ಎಂದು ತಿಳಿದು ಬಂದಿದೆ. ಆರೋಪಿಯನ್ನು ಬಂಧಿಸಲು ಸೋಲದೇವನಹಳ್ಳಿ, ಸುಬ್ರಮಣ್ಯ ನಗರ ಪೊಲೀಸರು ಕೂಡ ಭಾಗಿಯಾಗಿದ್ದರು.ಆರೋಪಿಯ ಹಲ್ಲೆಯಿಂದ ಸೋಲದೇವನಹಳ್ಳಿ ಪೇದೆ ಶ್ರೀನಿವಾಸ್ ಹಾಗೂ ತಿಲಕ್ ಪಾರ್ಕ್ ಪೇದೆ ಮಂಜುನಾಥ್ ಗೆ ಗಾಯಗಳಾಗಿದ್ದು, ಸದ್ಯ ಆರೋಪಿ, ಪೇದೆಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 