ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸ: ಸಚಿವ ಶ್ರೀರಾಮುಲು
ಬಳ್ಳಾರಿ20: ಪಾದರಾಯನಪುರ ಹಲ್ಲೆ ಪ್ರಕರಣ ದೇಶದ್ರೋಹದ ಕೆಲಸವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ವಿಧಾನಸೌಧಲ್ಲಿ ಮಾತನಾಡಿದ ಅವರು, ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪಿಸ್ಥರು ಆದರೂ ಅವರಿಗೆ ತಕ್ಷಣ ಶಿಕ್ಷೆ ಕೊಡಬೇಕು. ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳು ಮರುಕಳಿಸದ ಹಾಗೆ ನೋಡಬೇಕು ಎಂದು ತಿಳಿಸಿದರು.
ಇನ್ನು ಆಶಾ ಕಾರ್ಯಕರ್ತರಿಗೆ ತೊಂದರೆಯಾಗುವುದನ್ನು ನಾವು ಸಹಿಸಲ್ಲ, ವೈದ್ಯಾಧಿಕಾರಿಗಳು ಅವರ ರಕ್ಷಣೆಗೆ, ಪ್ರಾಣ ಉಳಿಸಲು ಹೋಗಿದ್ದರು.
ಅವರ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಸರಿಯಲ್ಲ. ಈ ಕುರಿತು ಈಗಾಗಲೇ ಗೃಹ ಸಚಿವರ ಜತೆ ಚಚರ್ೆ ಮಾಡಿದ್ದೇನೆ. ಸಂಪುಟ ಸಭೆಯಲ್ಲೂ ಚಚರ್ೆ ನಡೆಸುತ್ತೇವೆ ಎಂದು ತಿಳಿಸಿದರು.
ರಾತ್ರಿ ವೇಳೆ ಅಧಿಕಾರಿಗಳು ಹೋಗ ಬಾರದಿತ್ತು ಎಂಬ ಜಮೀರ್ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು, ಕ್ವಾರಂಟೈನ್ನಲ್ಲಿ ಕೇರ್ ಮಾಡಬೇಕಾಗಿರುವುದು ಸಕರ್ಾರದ ಕರ್ತವ್ಯ. ಚಿಕಿತ್ಸೆ ಪ್ರಕ್ರಿಯೆಗಳನ್ನು ನಡೆಸಲು ನಮಗೆ ಯಾವುದೇ ಸಮಯ ಇರಲ್ಲ. ಕೊರೊನಾ ಚಿಕಿತ್ಸೆಗೆ ಯಾವುದೇ ಸಮಯ ನಿಗದಿ ಮಾಡಲು ಆಗುವುದಿಲ್ಲ. ಈ ಘಟನೆ ನಡೆದಿರುವುದು ತಪ್ಪು ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 