ಅಡ್ಡ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ

ಕೊಪ್ಪಳ 08: ಕುಷ್ಟಗಿ ಮತಕ್ಷೇತ್ರದ ಹೃದಯವಂತ ಶಾಸಕ ದೊಡ್ಡನಗೌಡ್ಷಹೆಚ್ಷ್‌ಪಾಟೀಲ ಸಾಹೇಬರು ಇಂದು ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದ ವಿರೂಪಾಕ್ಷಲಿಂಗ ಶಿವಾಚಾರ್ಯರ 9 ನೇ ವರ್ಷದ ಜಾತ್ರಾಮಹೋತ್ಸವ ಅಂಗವಾಗಿ ಅಡ್ಡ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಡಾ.ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ಪಕ್ಷದ ಹಿರಿಯರು ದೇವಿಂದ್ರ​‍್ಪ ಬಳೂಟಿಗಿ,ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೆ ಮಹೇಶ , ಮಂಡಲದ ಅಧ್ಯಕ್ಷ ಬಸವರಾಜ ಹಳ್ಳೂರು,ಹಾಗೂ ಚಳಗೇರಿ ಗ್ರಾಮದ ಗುರು ಹಿರಿಯರು ಮುಖಂಡರು ಯುವಕರು ಕಾರ್ಯಕರ್ತರು ಉಪಸ್ಥಿತಿ ಇದ್ದರು.