ಡಿಸೇಲ್ ಸುರಿದು ಮಗನನ್ನೇ ಸಜೀವ ದಹನಗೊಳಿಸಿದ ಹೆತ್ತವರು
Parents burn their Son alive
ಜಮಖಂಡಿ 08: ತಾಲೂಕಿನ ಬಿದರಿ ಗ್ರಾಮದಲ್ಲಿ ಹೆತ್ತ ತಂದೆ, ತಾಯಿ ಹಾಗೂ ಸಹೋದರ ಬಿಎಸ್ಎಫ್ ಯೋಧ ಸೇರಿಕೊಂಡು ಡಿಸೇಲ್ ಸುರಿದು ಮಗನನ್ನೇ ಸಜೀವ ದಹನ ಮಾಡಿದ ಧಾರುಣ ಘಟನೆ ನಡೆದಿದೆ.
ಬಿದರಿ ಗ್ರಾಮದ ಅನೀಲ ಕಾನಟ್ಟಿ (32) ಸಜೀವ ದಹನದಲ್ಲಿ ಸಾವನ್ನಪ್ಪಿದ ದುರ್ದೈವಿ. ತಂದೆ ಪರ್ಪ, ತಾಯಿ ಶಾಂತಾ, ಸಹೋದರ ಬಸವರಾಜ ಮೂವರು ಸೇರಿಕೊಂಡು ಡಿಸೇಲ್ ಸುರಿದು ಸಜೀವ ದಹನ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.
ಬಿದರಿ ಗ್ರಾಮದ ಅನೀಲ ಕಾನಟ್ಟಿ (32) ಮದ್ಯ ವ್ಯಸನಿಯಾಗಿದ್ದು. ನಿತ್ಯವೂ ತಂದೆ-ತಾಯಿಯೊಂದಿಗೆ ಜಗಳವಾಡುತ್ತಿದ್ದು. ಆತನ ಕಿರುಕುಳ ತಾಳದೆ ಕುಟುಂಬಸ್ಥರು ಬೇಸತ್ತು ಹೋಗಿದ್ದರು. ಆತನು ಕುಡಿದು ಬಂದು ಜಗಳಕ್ಕಿಳಿದಾಗ ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಅನೀಲನ ಕೈ, ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ. ನಂತರ ಆತನ ಮೇಲೆ ಡಿಸೇಲ್ ಸುರಿದು ಸಜೀವವಾಗಿ ದಹಿಸಿದ್ದಾರೆ ಎಂದು ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಜಿಲ್ಲಾ ಎಸ್ಪಿ, ಸಿದ್ದಾರ್ಥ ಗೋಯಲ್, ಡಿಎಸ್ಪಿ, ರೋಷನ್ ಜಮೀರ ಸೈಯದ ಅವರ ಮಾರ್ಗದರ್ಶನದಲ್ಲಿ ಸಿಪಿಐ, ಮಲ್ಲಪ್ಪ ಮಡ್ಡಿ, ಸಾವಳಗಿ ಪಿಎಸ್ಐ, ಅಪ್ಪು ಐಗಳಿ ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿರುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 